ಬ್ರೇಕಿಂಗ್ ನ್ಯೂಸ್
10-10-22 08:47 pm Mangalore Correspondent ಕರಾವಳಿ
ಉಳ್ಳಾಲ, ಅ.10 : ಕ್ಷುಲ್ಲಕ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆಸಿದ್ದಲ್ಲದೆ, ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಬಿಜೆಪಿ ಪುಢಾರಿ ಮತ್ತು ಪೊಲೀಸ್ ಸಿಬಂದಿಯೊಬ್ಬರು ಸೇರಿ ಹಲ್ಲೆಗೈದ ಘಟನೆ ಕೊಲ್ಯ ಬಳಿಯ ಕಣೀರು ತೋಟ ಎಂಬಲ್ಲಿ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ವಿಜಯಲಕ್ಷ್ಮಿ(43) ಹಲ್ಲೆಗೊಳಗಾದ ಮಹಿಳೆ. ನಿನ್ನೆ ರಾತ್ರಿ ವಿಜಯಲಕ್ಷ್ಮಿ ಅವರು ತಮ್ಮ ಮನೆಯ ಸಾಕು ನಾಯಿಗೆ ಅನ್ನ ಹಾಕುತ್ತಿದ್ದ ವೇಳೆ ಮನೆಯಂಗಳದ ಹೊರಗೆ ಸ್ಕೂಟರಲ್ಲಿ ತೆರಳುತ್ತಿದ್ದ ಸ್ಥಳೀಯ ಬಿಜೆಪಿ ಪುಢಾರಿ ಶೇಖರ್ ಕಣೀರ್ ತೋಟ ಎಂಬವರು ಕರ್ಕಷವಾಗಿ ಪದೇ ಪದೇ ಹಾರ್ನ್ ಹೊಡೆದಿದ್ದಾರೆ ಎನ್ನಲಾಗಿದೆ. ಹಾರ್ನ್ ಯಾಕ್ ಹೊಡೀತೀಯ ಎಂದು ವಿಜಯಲಕ್ಷ್ಮಿ ಅವರು ಶೇಖರ್ ಅವರಲ್ಲಿ ಪ್ರಶ್ನಿಸಿದ್ದಾರೆ. ಈ ವೇಳೆ, ಮಾತಿಗೆ ಮಾತು ಬೆಳೆದು ಶೇಖರ್ ಮತ್ತು ಸ್ಥಳೀಯ ನಿವಾಸಿ ಪಾಂಡೇಶ್ವರ ಪೊಲೀಸ್ ಠಾಣೆ ಸಿಬಂದಿ ನೂತನ್ ಕೊಲ್ಯ ಮತ್ತು ಇತರರು ವಿಜಯಲಕ್ಷ್ಮಿ ಅವರ ನಿವಾಸದ ಅಂಗಳಕ್ಕೆ ಬಂದಿದ್ದು ಮಹಿಳೆಯ ಕೈಎಳೆದು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮನೆಯೊಳಗಿದ್ದ ವಿಜಯಲಕ್ಷ್ಮಿ ಅವರ ಪತಿ ತೇಜ್ ಪಾಲ್, ಮಕ್ಕಳಾದ ಹಿತೇಶ್ ಮತ್ತು ಹರ್ಷ ಅವರು ಗಲಾಟೆ ತಡೆಯಲು ಬಂದಿದ್ದಾರೆ. ಜಟಾಪಟಿಯಲ್ಲಿ ವಿಜಯಲಕ್ಷ್ಮಿ ಮತ್ತು ಪತಿಯ ಮೇಲೆ ಹಲ್ಲೆ ನಡೆಸಲಾಗಿದ್ದು ವಿಜಯಲಕ್ಷ್ಮಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಳೆ ವೈಷಮ್ಯದಿಂದ ಹಲ್ಲೆ ಕೃತ್ಯ
ಸ್ಥಳೀಯ ಬಿಜೆಪಿ ಪುಢಾರಿ ಶೇಖರ್, ವಿಜಯಲಕ್ಷ್ಮಿ ಅವರ ನಡುವೆ ಹಿಂದಿನಿಂದಲೂ ವೈಷಮ್ಯ ಇತ್ತು. ವಿಜಯಲಕ್ಷ್ಮಿ ಅವರ ಮನೆಯ ಮುಂದೆ, ಶೇಖರ್ ತನ್ನ ಅತ್ತಿಗೆಗಾಗಿ ಮನೆಯನ್ನು ನಿರ್ಮಿಸಲು ಮುಂದಾಗಿದ್ದರು. ಶೇಖರ್ ನಿರ್ಮಿಸುತ್ತಿದ್ದ ಮನೆ ಕಾಮಗಾರಿಯನ್ನ ಅಕ್ರಮವೆಂದು ಕಾನೂನು ಹೋರಾಟ ನಡೆಸಿ ವಿಜಯಲಕ್ಷ್ಮಿ ತಡೆದಿದ್ದರು. ಇದರಿಂದ ಇವರ ನಡುವೆ ಹಿಂದಿನಿಂದಲೂ ವೈಷಮ್ಯ ಇತ್ತು. ಹಳೆ ವೈಷಮ್ಯದಲ್ಲಿ ಈಗ ಮಾತನಾಡಿಕೊಂಡು ಹಲ್ಲೆಗೂ ಯತ್ನಿಸಿದ್ದಾರೆ. ಘಟನೆ ಬಗ್ಗೆ ಶೇಖರ್, ಪೊಲೀಸ್ ಸಿಬಂದಿ ನೂತನ್ ಸೇರಿ ಐವರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Woman assaulted by police constable and BJP leader over horn matter in Ullal, Kolya resident Vijayalakshmi has been hospitalized after she suffered injuries. Bjp leader Shekar and Pandeshwara police station staff Nutan have assaulted women over silly reasons.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am