ಬ್ರೇಕಿಂಗ್ ನ್ಯೂಸ್
11-10-22 09:28 pm Mangalore Correspondent ಕರಾವಳಿ
ಮಂಗಳೂರು, ಅ.11: ವಾಮಂಜೂರಿನಲ್ಲಿ ಶಾರದೋತ್ಸವ ಆಚರಣೆಯ ನಿಮಿತ್ತ ಹಾಕಿದ್ದ ಬ್ಯಾನರ್ ಗಳನ್ನು ಹರಿದು ಹಾಕಿದ್ದ ಘಟನೆ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿತ್ತು. ವಿರೋಧಿ ಕೋಮಿನ ಕಿಡಿಗೇಡಿಗಳು ಕೃತ್ಯ ಎಸಗಿದ್ದರು ಅನ್ನುವ ರೀತಿಯೂ ಬಿಂಬಿತವಾಗಿತ್ತು. ರಾತ್ರೋರಾತ್ರಿ ಬ್ಯಾನರ್ ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಇದರ ಬೆನ್ನಲ್ಲೇ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಮೂವರು ಕಿಡಿಗೇಡಿ ಯುವಕರನ್ನು ಬಂಧಿಸಿದ್ದಾರೆ. ಗುರುಪುರ ಆಸುಪಾಸಿನ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ ಮತ್ತು ಪ್ರವೀಣ್ ಪೂಜಾರಿ ಎಂಬ ಮೂವರನ್ನು ಬಂಧಿಸಿದ್ದು, ಅವರು ಬಳಸಿದ್ದ ಸ್ವಿಫ್ಟ್ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.8ರ ಮಧ್ಯರಾತ್ರಿ 1.30ರಿಂದ ಎರಡು ಗಂಟೆ ಮಧ್ಯದಲ್ಲಿ ಯುವಕರು ಕೃತ್ಯ ಎಸಗಿದ್ದರು. ರಸ್ತೆ ಬದಿ ಹಾಕಿದ್ದ ಫ್ಲೆಕ್ಸನ್ನು ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿದ್ದರಿಂದ ಪೊಲೀಸರು ಅದನ್ನೇ ಆಧರಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.



ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದಳ್ಳುರಿ ನಡೆದಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಉಂಟಾದ ಉದ್ವಿಗ್ನ ಸ್ಥಿತಿ ಮತ್ತೊಬ್ಬನ ಕೊಲೆಯೊಂದಿಗೆ ಅವಸಾನ ಆಗಿತ್ತು. ಇದೀಗ ರಾತ್ರೋರಾತ್ರಿ ಶಾರದೋತ್ಸವಕ್ಕೆ ಹಾಕಿದ್ದ ಬ್ಯಾನರನ್ನು ಹರಿದು ಹಾಕಿದ್ದು ಇನ್ನೊಂದು ಕೋಮಿನವರು ಉದ್ದೇಶ ಪೂರ್ವಕ ನಡೆಸಿದ ಕೃತ್ಯ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದು, ಸಂಘಟನೆಯ ಒಳಗಿನ ವೈಮನಸ್ಸಿನಿಂದಲೇ ಈ ರೀತಿ ಕೃತ್ಯ ಎಸಗಿದ್ದರು ಅನ್ನೋದು ತಿಳಿದುಬಂದಿದೆ. ಯುವಕರು ಯಾಕಾಗಿ ಇಂತಹ ಕೃತ್ಯ ಎಸಗಿದ್ದಾರೆ, ಇದರ ಹಿಂದೆ ಕೋಮು ದ್ವೇಷ ಹರಡುವ ಉದ್ದೇಶ ಇತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಮಂಜೂರಿನಲ್ಲಿ ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ; ಮತ್ತೆ ಶಾಂತಿ ಕದಡಲು ಯತ್ನ
The city police have detained three persons on Tuesday, October 11, in connection with tearing a flex hung at a public place by Vamanjoor Friends' Association for Sharadotsav.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm