ಬ್ರೇಕಿಂಗ್ ನ್ಯೂಸ್
11-10-22 09:28 pm Mangalore Correspondent ಕರಾವಳಿ
ಮಂಗಳೂರು, ಅ.11: ವಾಮಂಜೂರಿನಲ್ಲಿ ಶಾರದೋತ್ಸವ ಆಚರಣೆಯ ನಿಮಿತ್ತ ಹಾಕಿದ್ದ ಬ್ಯಾನರ್ ಗಳನ್ನು ಹರಿದು ಹಾಕಿದ್ದ ಘಟನೆ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿತ್ತು. ವಿರೋಧಿ ಕೋಮಿನ ಕಿಡಿಗೇಡಿಗಳು ಕೃತ್ಯ ಎಸಗಿದ್ದರು ಅನ್ನುವ ರೀತಿಯೂ ಬಿಂಬಿತವಾಗಿತ್ತು. ರಾತ್ರೋರಾತ್ರಿ ಬ್ಯಾನರ್ ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಇದರ ಬೆನ್ನಲ್ಲೇ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಮೂವರು ಕಿಡಿಗೇಡಿ ಯುವಕರನ್ನು ಬಂಧಿಸಿದ್ದಾರೆ. ಗುರುಪುರ ಆಸುಪಾಸಿನ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ ಮತ್ತು ಪ್ರವೀಣ್ ಪೂಜಾರಿ ಎಂಬ ಮೂವರನ್ನು ಬಂಧಿಸಿದ್ದು, ಅವರು ಬಳಸಿದ್ದ ಸ್ವಿಫ್ಟ್ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.8ರ ಮಧ್ಯರಾತ್ರಿ 1.30ರಿಂದ ಎರಡು ಗಂಟೆ ಮಧ್ಯದಲ್ಲಿ ಯುವಕರು ಕೃತ್ಯ ಎಸಗಿದ್ದರು. ರಸ್ತೆ ಬದಿ ಹಾಕಿದ್ದ ಫ್ಲೆಕ್ಸನ್ನು ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿದ್ದರಿಂದ ಪೊಲೀಸರು ಅದನ್ನೇ ಆಧರಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.



ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದಳ್ಳುರಿ ನಡೆದಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಉಂಟಾದ ಉದ್ವಿಗ್ನ ಸ್ಥಿತಿ ಮತ್ತೊಬ್ಬನ ಕೊಲೆಯೊಂದಿಗೆ ಅವಸಾನ ಆಗಿತ್ತು. ಇದೀಗ ರಾತ್ರೋರಾತ್ರಿ ಶಾರದೋತ್ಸವಕ್ಕೆ ಹಾಕಿದ್ದ ಬ್ಯಾನರನ್ನು ಹರಿದು ಹಾಕಿದ್ದು ಇನ್ನೊಂದು ಕೋಮಿನವರು ಉದ್ದೇಶ ಪೂರ್ವಕ ನಡೆಸಿದ ಕೃತ್ಯ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದು, ಸಂಘಟನೆಯ ಒಳಗಿನ ವೈಮನಸ್ಸಿನಿಂದಲೇ ಈ ರೀತಿ ಕೃತ್ಯ ಎಸಗಿದ್ದರು ಅನ್ನೋದು ತಿಳಿದುಬಂದಿದೆ. ಯುವಕರು ಯಾಕಾಗಿ ಇಂತಹ ಕೃತ್ಯ ಎಸಗಿದ್ದಾರೆ, ಇದರ ಹಿಂದೆ ಕೋಮು ದ್ವೇಷ ಹರಡುವ ಉದ್ದೇಶ ಇತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಮಂಜೂರಿನಲ್ಲಿ ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ; ಮತ್ತೆ ಶಾಂತಿ ಕದಡಲು ಯತ್ನ
The city police have detained three persons on Tuesday, October 11, in connection with tearing a flex hung at a public place by Vamanjoor Friends' Association for Sharadotsav.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am