ಬ್ರೇಕಿಂಗ್ ನ್ಯೂಸ್
11-10-22 09:28 pm Mangalore Correspondent ಕರಾವಳಿ
ಮಂಗಳೂರು, ಅ.11: ವಾಮಂಜೂರಿನಲ್ಲಿ ಶಾರದೋತ್ಸವ ಆಚರಣೆಯ ನಿಮಿತ್ತ ಹಾಕಿದ್ದ ಬ್ಯಾನರ್ ಗಳನ್ನು ಹರಿದು ಹಾಕಿದ್ದ ಘಟನೆ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿತ್ತು. ವಿರೋಧಿ ಕೋಮಿನ ಕಿಡಿಗೇಡಿಗಳು ಕೃತ್ಯ ಎಸಗಿದ್ದರು ಅನ್ನುವ ರೀತಿಯೂ ಬಿಂಬಿತವಾಗಿತ್ತು. ರಾತ್ರೋರಾತ್ರಿ ಬ್ಯಾನರ್ ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಇದರ ಬೆನ್ನಲ್ಲೇ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಮೂವರು ಕಿಡಿಗೇಡಿ ಯುವಕರನ್ನು ಬಂಧಿಸಿದ್ದಾರೆ. ಗುರುಪುರ ಆಸುಪಾಸಿನ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ ಮತ್ತು ಪ್ರವೀಣ್ ಪೂಜಾರಿ ಎಂಬ ಮೂವರನ್ನು ಬಂಧಿಸಿದ್ದು, ಅವರು ಬಳಸಿದ್ದ ಸ್ವಿಫ್ಟ್ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.8ರ ಮಧ್ಯರಾತ್ರಿ 1.30ರಿಂದ ಎರಡು ಗಂಟೆ ಮಧ್ಯದಲ್ಲಿ ಯುವಕರು ಕೃತ್ಯ ಎಸಗಿದ್ದರು. ರಸ್ತೆ ಬದಿ ಹಾಕಿದ್ದ ಫ್ಲೆಕ್ಸನ್ನು ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿದ್ದರಿಂದ ಪೊಲೀಸರು ಅದನ್ನೇ ಆಧರಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.



ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದಳ್ಳುರಿ ನಡೆದಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಉಂಟಾದ ಉದ್ವಿಗ್ನ ಸ್ಥಿತಿ ಮತ್ತೊಬ್ಬನ ಕೊಲೆಯೊಂದಿಗೆ ಅವಸಾನ ಆಗಿತ್ತು. ಇದೀಗ ರಾತ್ರೋರಾತ್ರಿ ಶಾರದೋತ್ಸವಕ್ಕೆ ಹಾಕಿದ್ದ ಬ್ಯಾನರನ್ನು ಹರಿದು ಹಾಕಿದ್ದು ಇನ್ನೊಂದು ಕೋಮಿನವರು ಉದ್ದೇಶ ಪೂರ್ವಕ ನಡೆಸಿದ ಕೃತ್ಯ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದು, ಸಂಘಟನೆಯ ಒಳಗಿನ ವೈಮನಸ್ಸಿನಿಂದಲೇ ಈ ರೀತಿ ಕೃತ್ಯ ಎಸಗಿದ್ದರು ಅನ್ನೋದು ತಿಳಿದುಬಂದಿದೆ. ಯುವಕರು ಯಾಕಾಗಿ ಇಂತಹ ಕೃತ್ಯ ಎಸಗಿದ್ದಾರೆ, ಇದರ ಹಿಂದೆ ಕೋಮು ದ್ವೇಷ ಹರಡುವ ಉದ್ದೇಶ ಇತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಮಂಜೂರಿನಲ್ಲಿ ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ; ಮತ್ತೆ ಶಾಂತಿ ಕದಡಲು ಯತ್ನ
The city police have detained three persons on Tuesday, October 11, in connection with tearing a flex hung at a public place by Vamanjoor Friends' Association for Sharadotsav.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm