ಬ್ರೇಕಿಂಗ್ ನ್ಯೂಸ್
12-10-22 02:18 pm Mangalore Correspondent ಕರಾವಳಿ
ಮಂಗಳೂರು, ಅ.12: ಪಣಂಬೂರಿನ ಎನ್ಎಂಪಿಟಿ ಬಂದರಿನಲ್ಲಿ ಸಿಐಎಸ್ಎಫ್ ಭದ್ರತಾ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್ಐ ಒಬ್ಬರು ತನ್ನದೇ ಗನ್ ನಲ್ಲಿ ಶೂಟ್ ಮಾಡ್ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮೂಲತಃ ರಾಜಸ್ಥಾನದ ಭರತ್ ಪುರ ಜಿಲ್ಲೆಯ ನಿವಾಸಿ ಜ್ಯೋತಿ ಬಾಯಿ (33) ಆತ್ಮಹತ್ಯೆಗೆ ಯತ್ನಿಸಿದವರು. ಇಂದು ಬೆಳಗ್ಗೆ ಎನ್ಎಂಪಿಟಿ ಗೇಟ್ ನಲ್ಲಿ ಕರ್ತವ್ಯದಲ್ಲಿದ್ದಾಗಲೇ ತನ್ನದೇ ಪಿಸ್ತೂಲ್ನಲ್ಲಿ ಶೂಟ್ ಮಾಡ್ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ಕೂಡಲೇ ಅವರನ್ನು ಜೊತೆಗಿದ್ದ ಸಿಬಂದಿ ಮಂಗಳೂರಿನ ಎಜೆ ಆಸ್ಪತ್ರೆಗೆ ಸೇರಿಸಿದ್ದಾರೆ.
ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಜ್ಯೋತಿ ಬಾಯಿ ಮತ್ತು ಅವರ ಪತಿ ಓಮ್ ಬೀರ್ ಸಿಂಗ್ ಇಬ್ಬರೂ ಸಿಐಎಸ್ಎಫ್ ಭದ್ರತಾ ಪಡೆಯಲ್ಲಿದ್ದಾರೆ. ಓಮ್ ಬೀರ್ ಸಿಂಗ್ ಸುರತ್ಕಲ್ ಎಂಆರ್ ಪಿಎಲ್ ನಲ್ಲಿ ಸಿಐಎಸ್ಎಫ್ ಕಮಾಂಡೆಂಟ್ ಆಗಿದ್ದಾರೆ. ಆಂತರಿಕ ಭಿನ್ನಾಭಿಪ್ರಾಯದಿಂದಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಮಾಹಿತಿಗಳಿವೆ. ಪೊಲೀಸರ ಪ್ರಕಾರ, ಜ್ಯೋತಿ ಬಾಯಿ ಅಪಾಯದಿಂದ ಪಾರಾಗಿದ್ದಾರೆ. ಸದ್ಯಕ್ಕೆ ಚಿಕಿತ್ಸೆ ಮುಂದುವರಿಸಲಾಗಿದೆ ಎನ್ನುವ ಮಾಹಿತಿಯಿದೆ. ಘಟನಾ ಸ್ಥಳದಲ್ಲಿ ಹಿಂದಿಯಲ್ಲಿ ಬರೆದಿದ್ದ ಪತ್ರ ಸಿಕ್ಕಿದ್ದು, ಆತ್ಮಹತ್ಯೆ ಯತ್ನ ಮಾಡುತ್ತಿರುವುದಕ್ಕೆ ಬೇರೆ ಯಾರೂ ಕಾರಣರಲ್ಲ. ನನ್ನದೇ ಸ್ವಂತ ನಿರ್ಧಾರ, ಸಾರಿ ಅಮ್ಮ ಎಂದು ಪತ್ರ ಬರೆಯಲಾಗಿತ್ತು.
ಜ್ಯೋತಿ ಬಾಯಿ 2010ರ ಬ್ಯಾಚ್ ನಲ್ಲಿ ಎಸ್ಐ ಆಗಿ ಸಿಐಎಸ್ಎಫ್ ಕರ್ತವ್ಯಕ್ಕೆ ಸೇರ್ಪಡೆಯಾಗಿದ್ದು ಮಂಗಳೂರಿನ ಎನ್ಎಂಪಿಟಿ ಬಂದರಿನಲ್ಲಿ ಭದ್ರತಾ ವಿಭಾಗದಲ್ಲಿದ್ದರು. ಸಿಐಎಸ್ಎಫ್ ಕೇಂದ್ರೀಯ ಭದ್ರತಾ ಪಡೆಯಾಗಿದ್ದು, ಕೇಂದ್ರ ಸರಕಾರದಿಂದ ನಿರ್ವಹಿಸಲ್ಪಡುವ ಬಂದರು, ವಿಮಾನ ನಿಲ್ದಾಣ, ಎಂಆರ್ ಪಿಎಲ್ ಮಾದರಿಯ ಕೈಗಾರಿಕೆಗಳಲ್ಲಿ ಭದ್ರತೆಯನ್ನು ನೋಡಿಕೊಳ್ಳುತ್ತದೆ.
A 33-year-old CISF lady sub inspector attempted to end her life by shooting herself on Wednesday October 12 near NMPT gate. Jyothi Bai hailing from Bharathpur district in Rajasthan, who is working as CISF sub inspector at NMPT, is the officer who is hospitalised.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am