ಬ್ರೇಕಿಂಗ್ ನ್ಯೂಸ್
12-10-22 07:07 pm Mangalore Correspondent ಕರಾವಳಿ
ಉಳ್ಳಾಲ, ಅ.12: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಿಂದ ಅಚಾನಕ್ಕಾಗಿ ಸಮುದ್ರಕ್ಕೆ ಬಿದ್ದ ವ್ಯಕ್ತಿಯನ್ನ ಸ್ಥಳದಲ್ಲೇ ಇದ್ದ ವಿದೇಶಿ ಪ್ರವಾಸಿಗನೊಬ್ಬ ರಕ್ಷಿಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಅಸ್ವಸ್ಥಗೊಂಡ ವ್ಯಕ್ತಿಯನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮೇಶ್ವರ ರೈಲ್ವೇ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಚೆಟ್ಟಿಯಾರ್(41) ರಕ್ಷಿಸಲ್ಪಟ್ಟ ವ್ಯಕ್ತಿ. ಇಂದು ಮಧ್ಯಾಹ್ನದ ವೇಳೆ ಪ್ರವೀಣ್ ಅವರು ಸೋಮೇಶ್ವರ ಕಡಲ ತೀರದ ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲೇ ಮೀನಿಗೆ ಗಾಳ ಹಾಕುತ್ತಿದ್ದ ಸ್ವೀಡನ್ ದೇಶದ ಪ್ರವಾಸಿಗ ಆ್ಯಡಮ್ ಎಂಬಾತ ತಕ್ಷಣ ಸಮುದ್ರಕ್ಕೆ ಧುಮುಕಿ ಪ್ರವೀಣನ್ನ ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ನೀರು ಕುಡಿದು ತೀವ್ರ ಅಸ್ವಸ್ಥಗೊಂಡಿದ್ದ ಪ್ರವೀಣ ಅವರನ್ನು ಸ್ಥಳೀಯರು ಸೇರಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರವೀಣ್ ಅವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರವೀಣ್ ಪ್ರಾಣ ರಕ್ಷಿಸಿದ ವಿದೇಶಿ ಪ್ರಜೆ ಆ್ಯಡಮ್ ಅವರ ಕಾರ್ಯದ ಬಗ್ಗೆ ಸ್ಥಳೀಯರು ಮತ್ತು ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಂದೂವರೆ ತಿಂಗಳ ಭಾರತ ದೇಶದ ಪ್ರವಾಸದಲ್ಲಿರುವ ಆ್ಯಡಮ್ ಅವರು ಚೆನ್ನೈ ಇನ್ನಿತರ ಬೀಚ್ ಗಳಿಗೆ ಭೇಟಿ ನೀಡಿದ್ದು ನಿನ್ನೆ ಸೋಮೇಶ್ವರ ಬೀಚ್ ಆಗಮಿಸಿದ್ದು ಪ್ರವೀಣ್ ಪಾಲಿಗೆ ಆಪತ್ಬಾಂಧವನಾಗಿದ್ದಾರೆ.

ಸೋಮೇಶ್ವರ ಬೀಚಲ್ಲಿ ಆತ್ಮಹತ್ಯೆ, ನೀರಪಾಲಾಗುವ ಅವಘಡ ನಿರಂತರ ಆಗುತ್ತಿರುತ್ತದೆ. ಅನೇಕ ಸಂದರ್ಭಗಳಲ್ಲಿ ಇಲ್ಲಿ ಸಮುದ್ರ ಪಾಲಾಗುತ್ತಿದ್ದವರನ್ನ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರವಾಸೋದ್ಯಮ ಇಲಾಖೆಯು ಈ ಪ್ರದೇಶದಲ್ಲಿ ಖಾಯಂ ಜೀವರಕ್ಷಕ ಸಿಬ್ಬಂದಿಗಳನ್ನ ನೇಮಿಸದೆ ನಿರ್ಲಕ್ಷ ವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Man saved from drowning by foreign national at Someshwara beach at Ullal in Mangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm