ಬ್ರೇಕಿಂಗ್ ನ್ಯೂಸ್
10-10-20 05:51 pm Mangaluru Correspondent ಕರಾವಳಿ
ಮಂಗಳೂರು, ಅ.10: ನವರಾತ್ರಿ ವೇಳೆ ಹುಲಿವೇಷಗಳ ಅಬ್ಬರ ಕಾಮನ್. ಆದರೆ ಈ ಬಾರಿ ಕೊರೊನಾ ಕಾರಣದಿಂದ ಹುಲಿವೇಷ ಕುಣಿತಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದು ಕರಾವಳಿಯಲ್ಲಿ ಹುಲಿವೇಷ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹುಲಿವೇಷ ಆಡಂಬರಕ್ಕಲ್ಲ. ಅದು ತುಳುನಾಡಿನ ಸಂಸ್ಕೃತಿ. ಹಾಗಾಗಿ ಕೊರೊನಾ ಕಾರಣಕ್ಕೆ ಹುಲಿವೇಷ ನಿಲ್ಲಿಸಬಾರದು. ಸರಳ ರೀತಿಯಲ್ಲಿ ದೇವರ ಸೇವೆಗೆ ಹುಲಿವೇಷ ತಂಡಗಳಿಗೆ ಅವಕಾಶ ನೀಡಬೇಕು ಎಂದು ಮಂಗಳಾದೇವಿ ದಸರಾ ಶೋಭಾಯಾತ್ರೆ ಸಮಿತಿ ಒತ್ತಾಯಿಸಿದೆ.
ಸಮಿತಿಯ ಅಧ್ಯಕ್ಷ ದಿಲ್ರಾಜ್ ಆಳ್ವ ಸುದ್ದಿಗೋಷ್ಟಿಯಲ್ಲಿ ಈ ಒತ್ತಾಯ ಮಾಡಿದ್ದು, ಜಿಲ್ಲಾಡಳಿತ ಕೋವಿಡ್ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತಕ್ಕೆ ನಿಷೇಧ ಹೇರಿದ್ದು ಸರಿಯಲ್ಲ. ಮಂಗಳಾದೇವಿ ಉತ್ಸವದ ಸಮಯದಲ್ಲಿ ಹಿಂದಿನಿಂದಲೂ ರಥೋತ್ಸವಕ್ಕೆ ಹುಲಿವೇಷ ಹಾಕುವ ಸಂಪ್ರದಾಯ ಇದೆ. ಈ ಸಂಪ್ರದಾಯವನ್ನು ನಿಲ್ಲಿಸುವಂತೆ ಆಗಬಾರದು. ಸಾಂಕೇತಿಕವಾಗಿ ದೇವರ ಸೇವೆ ನಡೆಸಲು ಅವಕಾಶ ನೀಡಬೇಕು. ಹುಲಿವೇಷವನ್ನು ವ್ರತ ಹಿಡಿದು ನಡೆಸುವ ಮಂದಿ ಇದ್ದಾರೆ. ಪ್ರತಿ ವರ್ಷವೂ ವೇಷ ಹಾಕುವವರೂ ಇದ್ದಾರೆ. ನವರಾತ್ರಿಗೂ ಹುಲಿವೇಷಕ್ಕೂ ಹತ್ತಿರದ ನಂಟು ಇದ್ದು ಭಾವನಾತ್ಮಕ ವಿಚಾರವಾಗಿದೆ ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷ ದಿನೇಶ್ ಕುಂಪಲ ಮಾತನಾಡಿ, ಈ ಬಾರಿ ಹುಲಿವೇಷ ಕೇವಲ ಹರಕೆ ಮಾತ್ರಕ್ಕೆ ನಡೆಸಲಾಗುವುದು. ಯಾವುದೇ ಆದಾಯ ಗಳಿಸುವ, ಮನರಂಜನೆ ಉದ್ದೇಶಕ್ಕಾಗಿ ಹುಲಿವೇಷ ಇರುವುದಿಲ್ಲ. ನವರಾತ್ರಿಯ ಮೆರವಣಿಗೆಯಲ್ಲಿ ಹುಲಿ ವೇಷಧಾರಿಗಳು ನರ್ತನ ಮಾಡುವುದು ಇಲ್ಲಿನ ಸಂಪ್ರದಾಯ. ಹುಲಿವೇಷ ಇಲ್ಲದ ದಸರಾ, ಜಂಬೂ ಸವಾರಿ ಇಲ್ಲದ ಮೈಸೂರು ದಸರಾದಂತೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಗಿರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹನೀಷ್ ಎನ್. ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.
Mangaladevi Dasara Shobayatrey urges for pilivesha this Navaratri in Mangalore after the government restricted for pilivesha, the tiger dance, during this Navaratri festival.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 06:36 pm
Mangalore Correspondent
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm