ಬ್ರೇಕಿಂಗ್ ನ್ಯೂಸ್
10-10-20 05:51 pm Mangaluru Correspondent ಕರಾವಳಿ
ಮಂಗಳೂರು, ಅ.10: ನವರಾತ್ರಿ ವೇಳೆ ಹುಲಿವೇಷಗಳ ಅಬ್ಬರ ಕಾಮನ್. ಆದರೆ ಈ ಬಾರಿ ಕೊರೊನಾ ಕಾರಣದಿಂದ ಹುಲಿವೇಷ ಕುಣಿತಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದು ಕರಾವಳಿಯಲ್ಲಿ ಹುಲಿವೇಷ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹುಲಿವೇಷ ಆಡಂಬರಕ್ಕಲ್ಲ. ಅದು ತುಳುನಾಡಿನ ಸಂಸ್ಕೃತಿ. ಹಾಗಾಗಿ ಕೊರೊನಾ ಕಾರಣಕ್ಕೆ ಹುಲಿವೇಷ ನಿಲ್ಲಿಸಬಾರದು. ಸರಳ ರೀತಿಯಲ್ಲಿ ದೇವರ ಸೇವೆಗೆ ಹುಲಿವೇಷ ತಂಡಗಳಿಗೆ ಅವಕಾಶ ನೀಡಬೇಕು ಎಂದು ಮಂಗಳಾದೇವಿ ದಸರಾ ಶೋಭಾಯಾತ್ರೆ ಸಮಿತಿ ಒತ್ತಾಯಿಸಿದೆ.
ಸಮಿತಿಯ ಅಧ್ಯಕ್ಷ ದಿಲ್ರಾಜ್ ಆಳ್ವ ಸುದ್ದಿಗೋಷ್ಟಿಯಲ್ಲಿ ಈ ಒತ್ತಾಯ ಮಾಡಿದ್ದು, ಜಿಲ್ಲಾಡಳಿತ ಕೋವಿಡ್ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತಕ್ಕೆ ನಿಷೇಧ ಹೇರಿದ್ದು ಸರಿಯಲ್ಲ. ಮಂಗಳಾದೇವಿ ಉತ್ಸವದ ಸಮಯದಲ್ಲಿ ಹಿಂದಿನಿಂದಲೂ ರಥೋತ್ಸವಕ್ಕೆ ಹುಲಿವೇಷ ಹಾಕುವ ಸಂಪ್ರದಾಯ ಇದೆ. ಈ ಸಂಪ್ರದಾಯವನ್ನು ನಿಲ್ಲಿಸುವಂತೆ ಆಗಬಾರದು. ಸಾಂಕೇತಿಕವಾಗಿ ದೇವರ ಸೇವೆ ನಡೆಸಲು ಅವಕಾಶ ನೀಡಬೇಕು. ಹುಲಿವೇಷವನ್ನು ವ್ರತ ಹಿಡಿದು ನಡೆಸುವ ಮಂದಿ ಇದ್ದಾರೆ. ಪ್ರತಿ ವರ್ಷವೂ ವೇಷ ಹಾಕುವವರೂ ಇದ್ದಾರೆ. ನವರಾತ್ರಿಗೂ ಹುಲಿವೇಷಕ್ಕೂ ಹತ್ತಿರದ ನಂಟು ಇದ್ದು ಭಾವನಾತ್ಮಕ ವಿಚಾರವಾಗಿದೆ ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷ ದಿನೇಶ್ ಕುಂಪಲ ಮಾತನಾಡಿ, ಈ ಬಾರಿ ಹುಲಿವೇಷ ಕೇವಲ ಹರಕೆ ಮಾತ್ರಕ್ಕೆ ನಡೆಸಲಾಗುವುದು. ಯಾವುದೇ ಆದಾಯ ಗಳಿಸುವ, ಮನರಂಜನೆ ಉದ್ದೇಶಕ್ಕಾಗಿ ಹುಲಿವೇಷ ಇರುವುದಿಲ್ಲ. ನವರಾತ್ರಿಯ ಮೆರವಣಿಗೆಯಲ್ಲಿ ಹುಲಿ ವೇಷಧಾರಿಗಳು ನರ್ತನ ಮಾಡುವುದು ಇಲ್ಲಿನ ಸಂಪ್ರದಾಯ. ಹುಲಿವೇಷ ಇಲ್ಲದ ದಸರಾ, ಜಂಬೂ ಸವಾರಿ ಇಲ್ಲದ ಮೈಸೂರು ದಸರಾದಂತೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಗಿರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹನೀಷ್ ಎನ್. ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.
Mangaladevi Dasara Shobayatrey urges for pilivesha this Navaratri in Mangalore after the government restricted for pilivesha, the tiger dance, during this Navaratri festival.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am