ಬ್ರೇಕಿಂಗ್ ನ್ಯೂಸ್
10-10-20 05:51 pm Mangaluru Correspondent ಕರಾವಳಿ
ಮಂಗಳೂರು, ಅ.10: ನವರಾತ್ರಿ ವೇಳೆ ಹುಲಿವೇಷಗಳ ಅಬ್ಬರ ಕಾಮನ್. ಆದರೆ ಈ ಬಾರಿ ಕೊರೊನಾ ಕಾರಣದಿಂದ ಹುಲಿವೇಷ ಕುಣಿತಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದು ಕರಾವಳಿಯಲ್ಲಿ ಹುಲಿವೇಷ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹುಲಿವೇಷ ಆಡಂಬರಕ್ಕಲ್ಲ. ಅದು ತುಳುನಾಡಿನ ಸಂಸ್ಕೃತಿ. ಹಾಗಾಗಿ ಕೊರೊನಾ ಕಾರಣಕ್ಕೆ ಹುಲಿವೇಷ ನಿಲ್ಲಿಸಬಾರದು. ಸರಳ ರೀತಿಯಲ್ಲಿ ದೇವರ ಸೇವೆಗೆ ಹುಲಿವೇಷ ತಂಡಗಳಿಗೆ ಅವಕಾಶ ನೀಡಬೇಕು ಎಂದು ಮಂಗಳಾದೇವಿ ದಸರಾ ಶೋಭಾಯಾತ್ರೆ ಸಮಿತಿ ಒತ್ತಾಯಿಸಿದೆ.

ಸಮಿತಿಯ ಅಧ್ಯಕ್ಷ ದಿಲ್ರಾಜ್ ಆಳ್ವ ಸುದ್ದಿಗೋಷ್ಟಿಯಲ್ಲಿ ಈ ಒತ್ತಾಯ ಮಾಡಿದ್ದು, ಜಿಲ್ಲಾಡಳಿತ ಕೋವಿಡ್ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತಕ್ಕೆ ನಿಷೇಧ ಹೇರಿದ್ದು ಸರಿಯಲ್ಲ. ಮಂಗಳಾದೇವಿ ಉತ್ಸವದ ಸಮಯದಲ್ಲಿ ಹಿಂದಿನಿಂದಲೂ ರಥೋತ್ಸವಕ್ಕೆ ಹುಲಿವೇಷ ಹಾಕುವ ಸಂಪ್ರದಾಯ ಇದೆ. ಈ ಸಂಪ್ರದಾಯವನ್ನು ನಿಲ್ಲಿಸುವಂತೆ ಆಗಬಾರದು. ಸಾಂಕೇತಿಕವಾಗಿ ದೇವರ ಸೇವೆ ನಡೆಸಲು ಅವಕಾಶ ನೀಡಬೇಕು. ಹುಲಿವೇಷವನ್ನು ವ್ರತ ಹಿಡಿದು ನಡೆಸುವ ಮಂದಿ ಇದ್ದಾರೆ. ಪ್ರತಿ ವರ್ಷವೂ ವೇಷ ಹಾಕುವವರೂ ಇದ್ದಾರೆ. ನವರಾತ್ರಿಗೂ ಹುಲಿವೇಷಕ್ಕೂ ಹತ್ತಿರದ ನಂಟು ಇದ್ದು ಭಾವನಾತ್ಮಕ ವಿಚಾರವಾಗಿದೆ ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷ ದಿನೇಶ್ ಕುಂಪಲ ಮಾತನಾಡಿ, ಈ ಬಾರಿ ಹುಲಿವೇಷ ಕೇವಲ ಹರಕೆ ಮಾತ್ರಕ್ಕೆ ನಡೆಸಲಾಗುವುದು. ಯಾವುದೇ ಆದಾಯ ಗಳಿಸುವ, ಮನರಂಜನೆ ಉದ್ದೇಶಕ್ಕಾಗಿ ಹುಲಿವೇಷ ಇರುವುದಿಲ್ಲ. ನವರಾತ್ರಿಯ ಮೆರವಣಿಗೆಯಲ್ಲಿ ಹುಲಿ ವೇಷಧಾರಿಗಳು ನರ್ತನ ಮಾಡುವುದು ಇಲ್ಲಿನ ಸಂಪ್ರದಾಯ. ಹುಲಿವೇಷ ಇಲ್ಲದ ದಸರಾ, ಜಂಬೂ ಸವಾರಿ ಇಲ್ಲದ ಮೈಸೂರು ದಸರಾದಂತೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಗಿರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹನೀಷ್ ಎನ್. ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.
Mangaladevi Dasara Shobayatrey urges for pilivesha this Navaratri in Mangalore after the government restricted for pilivesha, the tiger dance, during this Navaratri festival.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm