ಬ್ರೇಕಿಂಗ್ ನ್ಯೂಸ್
10-10-20 05:51 pm Mangaluru Correspondent ಕರಾವಳಿ
ಮಂಗಳೂರು, ಅ.10: ನವರಾತ್ರಿ ವೇಳೆ ಹುಲಿವೇಷಗಳ ಅಬ್ಬರ ಕಾಮನ್. ಆದರೆ ಈ ಬಾರಿ ಕೊರೊನಾ ಕಾರಣದಿಂದ ಹುಲಿವೇಷ ಕುಣಿತಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದು ಕರಾವಳಿಯಲ್ಲಿ ಹುಲಿವೇಷ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹುಲಿವೇಷ ಆಡಂಬರಕ್ಕಲ್ಲ. ಅದು ತುಳುನಾಡಿನ ಸಂಸ್ಕೃತಿ. ಹಾಗಾಗಿ ಕೊರೊನಾ ಕಾರಣಕ್ಕೆ ಹುಲಿವೇಷ ನಿಲ್ಲಿಸಬಾರದು. ಸರಳ ರೀತಿಯಲ್ಲಿ ದೇವರ ಸೇವೆಗೆ ಹುಲಿವೇಷ ತಂಡಗಳಿಗೆ ಅವಕಾಶ ನೀಡಬೇಕು ಎಂದು ಮಂಗಳಾದೇವಿ ದಸರಾ ಶೋಭಾಯಾತ್ರೆ ಸಮಿತಿ ಒತ್ತಾಯಿಸಿದೆ.

ಸಮಿತಿಯ ಅಧ್ಯಕ್ಷ ದಿಲ್ರಾಜ್ ಆಳ್ವ ಸುದ್ದಿಗೋಷ್ಟಿಯಲ್ಲಿ ಈ ಒತ್ತಾಯ ಮಾಡಿದ್ದು, ಜಿಲ್ಲಾಡಳಿತ ಕೋವಿಡ್ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತಕ್ಕೆ ನಿಷೇಧ ಹೇರಿದ್ದು ಸರಿಯಲ್ಲ. ಮಂಗಳಾದೇವಿ ಉತ್ಸವದ ಸಮಯದಲ್ಲಿ ಹಿಂದಿನಿಂದಲೂ ರಥೋತ್ಸವಕ್ಕೆ ಹುಲಿವೇಷ ಹಾಕುವ ಸಂಪ್ರದಾಯ ಇದೆ. ಈ ಸಂಪ್ರದಾಯವನ್ನು ನಿಲ್ಲಿಸುವಂತೆ ಆಗಬಾರದು. ಸಾಂಕೇತಿಕವಾಗಿ ದೇವರ ಸೇವೆ ನಡೆಸಲು ಅವಕಾಶ ನೀಡಬೇಕು. ಹುಲಿವೇಷವನ್ನು ವ್ರತ ಹಿಡಿದು ನಡೆಸುವ ಮಂದಿ ಇದ್ದಾರೆ. ಪ್ರತಿ ವರ್ಷವೂ ವೇಷ ಹಾಕುವವರೂ ಇದ್ದಾರೆ. ನವರಾತ್ರಿಗೂ ಹುಲಿವೇಷಕ್ಕೂ ಹತ್ತಿರದ ನಂಟು ಇದ್ದು ಭಾವನಾತ್ಮಕ ವಿಚಾರವಾಗಿದೆ ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷ ದಿನೇಶ್ ಕುಂಪಲ ಮಾತನಾಡಿ, ಈ ಬಾರಿ ಹುಲಿವೇಷ ಕೇವಲ ಹರಕೆ ಮಾತ್ರಕ್ಕೆ ನಡೆಸಲಾಗುವುದು. ಯಾವುದೇ ಆದಾಯ ಗಳಿಸುವ, ಮನರಂಜನೆ ಉದ್ದೇಶಕ್ಕಾಗಿ ಹುಲಿವೇಷ ಇರುವುದಿಲ್ಲ. ನವರಾತ್ರಿಯ ಮೆರವಣಿಗೆಯಲ್ಲಿ ಹುಲಿ ವೇಷಧಾರಿಗಳು ನರ್ತನ ಮಾಡುವುದು ಇಲ್ಲಿನ ಸಂಪ್ರದಾಯ. ಹುಲಿವೇಷ ಇಲ್ಲದ ದಸರಾ, ಜಂಬೂ ಸವಾರಿ ಇಲ್ಲದ ಮೈಸೂರು ದಸರಾದಂತೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಗಿರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹನೀಷ್ ಎನ್. ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.
Mangaladevi Dasara Shobayatrey urges for pilivesha this Navaratri in Mangalore after the government restricted for pilivesha, the tiger dance, during this Navaratri festival.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm