ಬ್ರೇಕಿಂಗ್ ನ್ಯೂಸ್
12-10-22 08:15 pm Mangalore Correspondent ಕರಾವಳಿ
ಉಳ್ಳಾಲ, ಅ.12 : ಕುತ್ತಾರಿನಲ್ಲಿ ಬೈಕಲ್ಲಿ ತೆರಳುತ್ತಿದ್ದ ಗೃಹ ರಕ್ಷಕ ಸಿಬ್ಬಂದಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದ್ದು ಮಗಳ ಮದುವೆ ತಯಾರಿಯಲ್ಲಿದ್ದ ಬಡಪಾಯಿ ಗೃಹ ರಕ್ಷಕ ಸಿಬ್ಬಂದಿ ಕಾಲು ಮುರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ್ದಾರೆ.
ಗೃಹ ರಕ್ಷಕ ದಳ ಸಿಬ್ಬಂದಿ ಹಮೀದ್ ಪಾವುಳ(52) ಅವರು ಅಪಘಾತದಿಂದ ಕಾಲು ಮುರಿತಕ್ಕೊಳಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಮಧ್ಯಾಹ್ನ ತನ್ನ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕುತ್ತಾರಿನಲ್ಲಿ ಅಪರಿಚಿತ ಬೈಕೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ರಸ್ತೆಗೆಸೆಯಲ್ಪಟ್ಟ ಹಮೀದ್ ಅವರ ಎಡಗಾಲು ಮುರಿದಿದೆ.

ಹಮೀದ್ ಅವರು ಗೃಹರಕ್ಷಕ ಸಿಬ್ಬಂದಿಯಾಗಿದ್ದು ಕಳೆದ ಅನೇಕ ವರುಷಗಳಿಂದ ಟ್ರಾಫಿಕ್ ವಾರ್ಡನ್ ಆಗಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೇಸು ಹಾಕುತ್ತಿದ್ದ ಟ್ರಾಫಿಕ್ ಪೊಲೀಸನಿಗೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಆರೋಪಿಯನ್ನ ಹಮೀದ್ ಅವರೇ ಬೆನ್ನಟ್ಟಿ ಹಿಡಿದಿದ್ದರು. ಹಮೀದ್ ಅವರ ಕಾರ್ಯವನ್ನ ಶ್ಲಾಘಿಸಿ ಅಂದಿನ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರು ಸನ್ಮಾನಿಸಿ ಬಹುಮಾನ ನೀಡಿದ್ದರು.ಬಡಪಾಯಿ ಹಮೀದ್ ಅವರ ಹಿರಿಯ ಮಗಳಿಗೆ ಇದೇ ಅಕ್ಟೋಬರ್ 30 ರಂದು ಮದುವೆ ನಿಶ್ಚಯವಾಗಿತ್ತು. ಹಮೀದ್ ಅವರು ಈ ಮೊದಲು ಅಪಘಾತಕ್ಕೀಡಾಗಿ ಬಲಗಾಲಿನ ಬೆರಳುಗಳನ್ನ ಕಳಕೊಂಡಿದ್ದರು. ಬಡತನದಲ್ಲಿರುವ ಹಮೀದ್ ಅವರು ಉಳ್ಳವರ ಸಹಕಾರದಲ್ಲಿ ಮಗಳ ಮದುವೆಗೆ ತಯಾರಿ ನಡೆಸುತ್ತಿದ್ದರು.

ಕಳೆದ ಕೆಲ ದಿನಗಳ ಹಿಂದಷ್ಟೆ ಉಳ್ಳಾಲ ಬೈಲಿನಲ್ಲಿ ಗಸ್ತಿನಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹೆಡ್ ಕಾನ್ಸ್ಟೇಬಲ್ ಲೋಕೇಶ್ ನಾಯಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆ ನಡೆದಿತ್ತು. ಗಾಯಾಳು ಲೋಕೇಶ್ ಇನ್ನೂ ಚೇತರಿಸಿಲ್ಲ.
Kuttar accident hit and run, traffic home guard leg broken, hospitalized in Mangalore.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm