ಬ್ರೇಕಿಂಗ್ ನ್ಯೂಸ್
12-10-22 08:15 pm Mangalore Correspondent ಕರಾವಳಿ
ಉಳ್ಳಾಲ, ಅ.12 : ಕುತ್ತಾರಿನಲ್ಲಿ ಬೈಕಲ್ಲಿ ತೆರಳುತ್ತಿದ್ದ ಗೃಹ ರಕ್ಷಕ ಸಿಬ್ಬಂದಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದ್ದು ಮಗಳ ಮದುವೆ ತಯಾರಿಯಲ್ಲಿದ್ದ ಬಡಪಾಯಿ ಗೃಹ ರಕ್ಷಕ ಸಿಬ್ಬಂದಿ ಕಾಲು ಮುರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ್ದಾರೆ.
ಗೃಹ ರಕ್ಷಕ ದಳ ಸಿಬ್ಬಂದಿ ಹಮೀದ್ ಪಾವುಳ(52) ಅವರು ಅಪಘಾತದಿಂದ ಕಾಲು ಮುರಿತಕ್ಕೊಳಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಮಧ್ಯಾಹ್ನ ತನ್ನ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕುತ್ತಾರಿನಲ್ಲಿ ಅಪರಿಚಿತ ಬೈಕೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ರಸ್ತೆಗೆಸೆಯಲ್ಪಟ್ಟ ಹಮೀದ್ ಅವರ ಎಡಗಾಲು ಮುರಿದಿದೆ.

ಹಮೀದ್ ಅವರು ಗೃಹರಕ್ಷಕ ಸಿಬ್ಬಂದಿಯಾಗಿದ್ದು ಕಳೆದ ಅನೇಕ ವರುಷಗಳಿಂದ ಟ್ರಾಫಿಕ್ ವಾರ್ಡನ್ ಆಗಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೇಸು ಹಾಕುತ್ತಿದ್ದ ಟ್ರಾಫಿಕ್ ಪೊಲೀಸನಿಗೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಆರೋಪಿಯನ್ನ ಹಮೀದ್ ಅವರೇ ಬೆನ್ನಟ್ಟಿ ಹಿಡಿದಿದ್ದರು. ಹಮೀದ್ ಅವರ ಕಾರ್ಯವನ್ನ ಶ್ಲಾಘಿಸಿ ಅಂದಿನ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರು ಸನ್ಮಾನಿಸಿ ಬಹುಮಾನ ನೀಡಿದ್ದರು.ಬಡಪಾಯಿ ಹಮೀದ್ ಅವರ ಹಿರಿಯ ಮಗಳಿಗೆ ಇದೇ ಅಕ್ಟೋಬರ್ 30 ರಂದು ಮದುವೆ ನಿಶ್ಚಯವಾಗಿತ್ತು. ಹಮೀದ್ ಅವರು ಈ ಮೊದಲು ಅಪಘಾತಕ್ಕೀಡಾಗಿ ಬಲಗಾಲಿನ ಬೆರಳುಗಳನ್ನ ಕಳಕೊಂಡಿದ್ದರು. ಬಡತನದಲ್ಲಿರುವ ಹಮೀದ್ ಅವರು ಉಳ್ಳವರ ಸಹಕಾರದಲ್ಲಿ ಮಗಳ ಮದುವೆಗೆ ತಯಾರಿ ನಡೆಸುತ್ತಿದ್ದರು.

ಕಳೆದ ಕೆಲ ದಿನಗಳ ಹಿಂದಷ್ಟೆ ಉಳ್ಳಾಲ ಬೈಲಿನಲ್ಲಿ ಗಸ್ತಿನಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹೆಡ್ ಕಾನ್ಸ್ಟೇಬಲ್ ಲೋಕೇಶ್ ನಾಯಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆ ನಡೆದಿತ್ತು. ಗಾಯಾಳು ಲೋಕೇಶ್ ಇನ್ನೂ ಚೇತರಿಸಿಲ್ಲ.
Kuttar accident hit and run, traffic home guard leg broken, hospitalized in Mangalore.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am