ಬ್ರೇಕಿಂಗ್ ನ್ಯೂಸ್
12-10-22 08:15 pm Mangalore Correspondent ಕರಾವಳಿ
ಉಳ್ಳಾಲ, ಅ.12 : ಕುತ್ತಾರಿನಲ್ಲಿ ಬೈಕಲ್ಲಿ ತೆರಳುತ್ತಿದ್ದ ಗೃಹ ರಕ್ಷಕ ಸಿಬ್ಬಂದಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದ್ದು ಮಗಳ ಮದುವೆ ತಯಾರಿಯಲ್ಲಿದ್ದ ಬಡಪಾಯಿ ಗೃಹ ರಕ್ಷಕ ಸಿಬ್ಬಂದಿ ಕಾಲು ಮುರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ್ದಾರೆ.
ಗೃಹ ರಕ್ಷಕ ದಳ ಸಿಬ್ಬಂದಿ ಹಮೀದ್ ಪಾವುಳ(52) ಅವರು ಅಪಘಾತದಿಂದ ಕಾಲು ಮುರಿತಕ್ಕೊಳಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಮಧ್ಯಾಹ್ನ ತನ್ನ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕುತ್ತಾರಿನಲ್ಲಿ ಅಪರಿಚಿತ ಬೈಕೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ರಸ್ತೆಗೆಸೆಯಲ್ಪಟ್ಟ ಹಮೀದ್ ಅವರ ಎಡಗಾಲು ಮುರಿದಿದೆ.

ಹಮೀದ್ ಅವರು ಗೃಹರಕ್ಷಕ ಸಿಬ್ಬಂದಿಯಾಗಿದ್ದು ಕಳೆದ ಅನೇಕ ವರುಷಗಳಿಂದ ಟ್ರಾಫಿಕ್ ವಾರ್ಡನ್ ಆಗಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೇಸು ಹಾಕುತ್ತಿದ್ದ ಟ್ರಾಫಿಕ್ ಪೊಲೀಸನಿಗೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಆರೋಪಿಯನ್ನ ಹಮೀದ್ ಅವರೇ ಬೆನ್ನಟ್ಟಿ ಹಿಡಿದಿದ್ದರು. ಹಮೀದ್ ಅವರ ಕಾರ್ಯವನ್ನ ಶ್ಲಾಘಿಸಿ ಅಂದಿನ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರು ಸನ್ಮಾನಿಸಿ ಬಹುಮಾನ ನೀಡಿದ್ದರು.ಬಡಪಾಯಿ ಹಮೀದ್ ಅವರ ಹಿರಿಯ ಮಗಳಿಗೆ ಇದೇ ಅಕ್ಟೋಬರ್ 30 ರಂದು ಮದುವೆ ನಿಶ್ಚಯವಾಗಿತ್ತು. ಹಮೀದ್ ಅವರು ಈ ಮೊದಲು ಅಪಘಾತಕ್ಕೀಡಾಗಿ ಬಲಗಾಲಿನ ಬೆರಳುಗಳನ್ನ ಕಳಕೊಂಡಿದ್ದರು. ಬಡತನದಲ್ಲಿರುವ ಹಮೀದ್ ಅವರು ಉಳ್ಳವರ ಸಹಕಾರದಲ್ಲಿ ಮಗಳ ಮದುವೆಗೆ ತಯಾರಿ ನಡೆಸುತ್ತಿದ್ದರು.

ಕಳೆದ ಕೆಲ ದಿನಗಳ ಹಿಂದಷ್ಟೆ ಉಳ್ಳಾಲ ಬೈಲಿನಲ್ಲಿ ಗಸ್ತಿನಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹೆಡ್ ಕಾನ್ಸ್ಟೇಬಲ್ ಲೋಕೇಶ್ ನಾಯಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆ ನಡೆದಿತ್ತು. ಗಾಯಾಳು ಲೋಕೇಶ್ ಇನ್ನೂ ಚೇತರಿಸಿಲ್ಲ.
Kuttar accident hit and run, traffic home guard leg broken, hospitalized in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm