ಬ್ರೇಕಿಂಗ್ ನ್ಯೂಸ್
13-10-22 08:22 pm Mangalore Correspondent ಕರಾವಳಿ
ಮಂಗಳೂರು, ಅ.13 : ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರೋಧಿ ಹೋರಾಟ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತದ ಜನಸಮೂಹದ ಹೋರಾಟವಾಗಿ ಪರಿವರ್ತನೆಗೊಂಡಿದೆ. ಟೋಲ್ ಗೇಟ್ ತೆರವಿನ ನಿರ್ಧಾರದ ಹೊರತಾಗಿಯೂ ಟೋಲ್ ಸಂಗ್ರಹ ಮುಂದುವರಿದಿರುವುದು ಬಿಜೆಪಿ ಸಂಸದ, ಶಾಸಕರು ನವಯುಗ್ ನಂತಹ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿರುವುದರ ಫಲ. ಒಟ್ಟಾರೆ ಬಿಜೆಪಿ ಆಡಳಿತದ ಜನದ್ರೋಹಿ ಧೋರಣೆಯನ್ನು ಸುರತ್ಕಲ್ ಟೋಲ್ ಸುಲಿಗೆ ಬಹಿರಂಗಗೊಳಿಸಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಗುರುವಾರ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಹಳೇಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಬೆಂಬಲಿಸಿ ನಡೆಸಿದ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಎರಡನ್ನೂ ಮಾರಾಟಕ್ಕಿಟ್ಟಿರುವ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸದ, ಟೋಲ್ ಮಾಫಿಯಾಗಳ ರಕ್ಷಣೆಗೆ ನಿಲ್ಲುವ ಬಿಜೆಪಿ ಸರಕಾರ, ಇಲ್ಲಿನ ಶಾಸಕರು ಶ್ರಮಜೀವಿ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾರೆ. ಜನತೆ ಇಂತಹ ಪಿತೂರಿಗಳಿಗೆ ಬಲಿಯಾಗದೆ ಜನಪರ ಹೋರಾಟಗಳನ್ನು ಬೆಂಬಲಿಸಬೇಕು ಎಂದು ವಿನಂತಿಸಿದರು.
ಸ್ಥಳೀಯ ನಗರಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದಕ್, ಬಂದರು ಶ್ರಮಿಕರ ಸಂಘದ ಅಧ್ಯಕ್ಷರಾದ ವಿಲ್ಲಿ ವಿಲ್ಸನ್, ಪ್ರಧಾನ ಕಾರ್ಯದರ್ಶಿ ಬಿ.ಕೆ ಇಮ್ತಿಯಾಜ್ ಮಾತನಾಡಿದರು. ಡಿವೈಎಫ್ಐ ಮುಖಂಡ ರಫೀಕ್ ಹರೇಕಳ, ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಹರೇಕಳ, ಶ್ರಮಿಕರ ಸಂಘದ ಮುಖಂಡರಾದ ಫಾರೂಕ್ ಉಳ್ಳಾಲ, ಮಜೀದ್ ಯು.ಬಿ, ಮಾಧವ ಕಾವೂರ್, ಸಿದ್ದಿಕ್ ಬೆಂಗರೆ, ಪಿ.ಟಿ ಮೊಹಮ್ಮದ್, ಪುತ್ತುಂಜಿ ಮಂಜನಾಡಿ, ಟೆಂಪೋ ಚಾಲಕರ ಸಂಘದ ಪ್ರಮುಖರಾದ ದೇವದಾಸ್, ಒಣ ಮೀನು ಕಾರ್ಮಿಕರ ವಿಭಾಗದ ಮೊಹಮ್ಮದ್ ಮೋನು, ರಫೀಕ್ ನಂದಾವರ, ಮಯ್ಯದ್ದಿ ಬೆಂಗರೆ, ಹಕೀಮ್ ಬೆಂಗರೆ, ರಫೀಕ್ ಬೆಂಗ್ರೆ ಉಪಸ್ಥಿತರಿದ್ದರು.
Muneer katipalla slams BJP for not keeping it's promise in vacating Surathkal toll plaza.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm