ಬ್ರೇಕಿಂಗ್ ನ್ಯೂಸ್
14-10-22 01:55 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ಹರೀಶ್ ಪೂಂಜ ಬೆಂಗಳೂರಿನಿಂದ ವಿಮಾನದ ಮೂಲಕ ಗುರುವಾರ ಸಂಜೆ ಮಂಗಳೂರಿಗೆ ಮರಳಿದ್ದು ಸರ್ಕಿಟ್ ಹೌಸ್ ನಲ್ಲಿ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ರಾತ್ರಿ 11 ಗಂಟೆ ವೇಳೆಗೆ ಮಂಗಳೂರಿನಿಂದ ಖಾಸಗಿ ಕಾರಿನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಇನ್ನೊಂದು ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಶಾಸಕರನ್ನು ಉದ್ದೇಶಿಸಿ ಅವಾಚ್ಯ ಪದಗಳಿಂದ ನಿಂದಿಸಿ, ತಲವಾರು ತೋರಿಸಿ ಬೆದರಿಸಿದ್ದಾನೆ.
ಶಾಸಕ ಹರೀಶ್ ಪೂಂಜ ಅವರ ಅಧಿಕೃತ ಕಾರು ಹಿಂದಿನಿಂದ ತೆರಳುತ್ತಿತ್ತು. ಹರೀಶ್ ಪೂಂಜ ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ, ಪಡೀಲ್ ಬಳಿಯ ಅಡ್ಯಾರ್ ಫ್ಲೈ ಓವರ್ ಬಳಿ ನಿಲ್ಲಿಸಿದ್ದ ಸ್ಕಾರ್ಪಿಯೋ ಕಾರು ಹಿಂಬಾಲಿಸಿದ್ದು ಫರಂಗಿಪೇಟೆಯಲ್ಲಿ ಅಡ್ಡಗಟ್ಟಿ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಶಾಸಕರಿದ್ದ ಕಾರನ್ನು ಫರಂಗಿಪೇಟೆಯಲ್ಲಿ ಪೊಲೀಸ್ ಔಟ್ ಪೋಸ್ಟ್ ಇರುವಲ್ಲಿ ಸೈಡಿಗೆ ಹಾಕುತ್ತಿದ್ದಂತೆ ಅವ್ಯಾಚ್ಯವಾಗಿ ಬೈದು ಬಿಸಿ ರೋಡ್ ಕಡೆಗೆ ಪರಾರಿಯಾಗಿದೆ. ಶಾಸಕರಿದ್ದ ಕಾರಿನಲ್ಲಿ ಪ್ರಶಾಂತ್ ಮತ್ತು ಕುಶಿತ್ ಎಂಬಿಬ್ಬರಿದ್ದರು. ಕುಶಿತ್ ಕಾರು ಚಲಾಯಿಸುತ್ತಿದ್ದು ಅವರನ್ನುದ್ದೇಶಿಸಿ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ.
Miscreants reportedly waylaid the car of Belthangady MLA Harish Poonja flashed swords. The incident was reported in the outskirts of the city at Farangipete on Thursday October 13.The incident took place while the MLA was returning from Bengaluru to Belthangady.The miscreants had followed the car from Padil to Farangipete.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm