ಬ್ರೇಕಿಂಗ್ ನ್ಯೂಸ್
14-10-22 01:55 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ಹರೀಶ್ ಪೂಂಜ ಬೆಂಗಳೂರಿನಿಂದ ವಿಮಾನದ ಮೂಲಕ ಗುರುವಾರ ಸಂಜೆ ಮಂಗಳೂರಿಗೆ ಮರಳಿದ್ದು ಸರ್ಕಿಟ್ ಹೌಸ್ ನಲ್ಲಿ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ರಾತ್ರಿ 11 ಗಂಟೆ ವೇಳೆಗೆ ಮಂಗಳೂರಿನಿಂದ ಖಾಸಗಿ ಕಾರಿನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಇನ್ನೊಂದು ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಶಾಸಕರನ್ನು ಉದ್ದೇಶಿಸಿ ಅವಾಚ್ಯ ಪದಗಳಿಂದ ನಿಂದಿಸಿ, ತಲವಾರು ತೋರಿಸಿ ಬೆದರಿಸಿದ್ದಾನೆ.
ಶಾಸಕ ಹರೀಶ್ ಪೂಂಜ ಅವರ ಅಧಿಕೃತ ಕಾರು ಹಿಂದಿನಿಂದ ತೆರಳುತ್ತಿತ್ತು. ಹರೀಶ್ ಪೂಂಜ ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ, ಪಡೀಲ್ ಬಳಿಯ ಅಡ್ಯಾರ್ ಫ್ಲೈ ಓವರ್ ಬಳಿ ನಿಲ್ಲಿಸಿದ್ದ ಸ್ಕಾರ್ಪಿಯೋ ಕಾರು ಹಿಂಬಾಲಿಸಿದ್ದು ಫರಂಗಿಪೇಟೆಯಲ್ಲಿ ಅಡ್ಡಗಟ್ಟಿ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಶಾಸಕರಿದ್ದ ಕಾರನ್ನು ಫರಂಗಿಪೇಟೆಯಲ್ಲಿ ಪೊಲೀಸ್ ಔಟ್ ಪೋಸ್ಟ್ ಇರುವಲ್ಲಿ ಸೈಡಿಗೆ ಹಾಕುತ್ತಿದ್ದಂತೆ ಅವ್ಯಾಚ್ಯವಾಗಿ ಬೈದು ಬಿಸಿ ರೋಡ್ ಕಡೆಗೆ ಪರಾರಿಯಾಗಿದೆ. ಶಾಸಕರಿದ್ದ ಕಾರಿನಲ್ಲಿ ಪ್ರಶಾಂತ್ ಮತ್ತು ಕುಶಿತ್ ಎಂಬಿಬ್ಬರಿದ್ದರು. ಕುಶಿತ್ ಕಾರು ಚಲಾಯಿಸುತ್ತಿದ್ದು ಅವರನ್ನುದ್ದೇಶಿಸಿ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ.
Miscreants reportedly waylaid the car of Belthangady MLA Harish Poonja flashed swords. The incident was reported in the outskirts of the city at Farangipete on Thursday October 13.The incident took place while the MLA was returning from Bengaluru to Belthangady.The miscreants had followed the car from Padil to Farangipete.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm