ಬ್ರೇಕಿಂಗ್ ನ್ಯೂಸ್
14-10-22 04:56 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬ್ಯಾಂಕ್ ಉದ್ಯೋಗಿಯೋರ್ವರು ಮನೆಯಲ್ಲಿ ಪತ್ನಿ, ಮಕ್ಕಳಿಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಚ್ಚಿಲ ಕೋಡಿ ಎಂಬಲ್ಲಿ ನಡೆದಿದೆ.
ಕೊಣಾಜೆ, ಮುಚ್ಚಿಲ ಕೋಡಿ ನಿವಾಸಿ ಚರಣ್ ರಾಜ್ ಶೆಟ್ಟಿ(37) ಆತ್ಮಹತ್ಯೆಗೈದ ಯುವಕ. ಚರಣ್ ಅವರು ಕರ್ನಾಟಕ ಬ್ಯಾಂಕ್ ನ ಪಚ್ಚನಾಡಿ ಶಾಖೆಯಲ್ಲಿ ಅಟೆಂಡರ್ ಆಗಿದ್ದರು. ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಅವರು ಮದ್ಯ ವ್ಯಸನಕ್ಕೆ ದಾಸರಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಪತ್ನಿ ಮತ್ತು ಇಬ್ಬರು ಮಕ್ಕಳು ನವರಾತ್ರಿಗೆಂದು ತವರು ಮನೆಗೆ ತೆರಳಿದ್ದರು. ನಿನ್ನೆ ಚರಣ್ ಅವರು ಪತ್ನಿಯ ಮನೆಗೆ ತೆರಳಿ ಮಕ್ಕಳನ್ನು ಮಾತನಾಡಿಸಿ ಬಂದಿದ್ದರಂತೆ.
ಚರಣ್ ಅವರ ತಾಯಿ ಶಾಲಾ ಬಸ್ಸಲ್ಲಿ ಕಂಡಕ್ಟರ್ ಆಗಿದ್ದು ಇಂದು ಬೆಳಗ್ಗೆ ಬೇಗನೆ ಕೆಲಸಕ್ಕೆ ತೆರಳಿದ್ದಾರೆ. ಬಳಿಕ ಚರಣ್ ಅವರು ಸಾಕು ನಾಯಿಯನ್ನ ಹಿಡಿದು ವಾಕಿಂಗ್ ತೆರಳಿದ್ದರಂತೆ. ಮಧ್ಯಾಹ್ನ ಚರಣ್ ಅವರ ಮೊಬೈಲಿಗೆ ಪತ್ನಿ ಕರೆ ಮಾಡಿದ್ದು ಸ್ವೀಕರಿಸದೇ ಇದ್ದಾಗ ಮುಚ್ಚಿಲ ಕೋಡಿಯ ನೆರೆಹೊರೆಯವರಲ್ಲಿ ವಿಚಾರಿಸಿದ್ದಾರೆ. ನೆರೆ ಹೊರೆಯವರು ಮನೆಯನ್ನ ಪರಿಶೀಲಿಸಿದಾಗ ಚರಣ್ ರಾಜ್ ನೇಣು ಬಿಗಿದಿದ್ದು ಅವರನ್ನ ರಕ್ಷಿಸಲು ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅಸುನೀಗಿದ್ದಾರೆ.
ಮೃತ ಚರಣ್ ರಾಜ್ ಅವರಿಗೆ ಆರು ತಿಂಗಳ ಮತ್ತು ಮೂರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
Ullal 37 year old Bank employee commits suicide in Mangalore , financial crises suspected. The deceased has been identified as Charan Raj Shetty (37).
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am