ಬ್ರೇಕಿಂಗ್ ನ್ಯೂಸ್
14-10-22 04:56 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬ್ಯಾಂಕ್ ಉದ್ಯೋಗಿಯೋರ್ವರು ಮನೆಯಲ್ಲಿ ಪತ್ನಿ, ಮಕ್ಕಳಿಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಚ್ಚಿಲ ಕೋಡಿ ಎಂಬಲ್ಲಿ ನಡೆದಿದೆ.
ಕೊಣಾಜೆ, ಮುಚ್ಚಿಲ ಕೋಡಿ ನಿವಾಸಿ ಚರಣ್ ರಾಜ್ ಶೆಟ್ಟಿ(37) ಆತ್ಮಹತ್ಯೆಗೈದ ಯುವಕ. ಚರಣ್ ಅವರು ಕರ್ನಾಟಕ ಬ್ಯಾಂಕ್ ನ ಪಚ್ಚನಾಡಿ ಶಾಖೆಯಲ್ಲಿ ಅಟೆಂಡರ್ ಆಗಿದ್ದರು. ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಅವರು ಮದ್ಯ ವ್ಯಸನಕ್ಕೆ ದಾಸರಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಪತ್ನಿ ಮತ್ತು ಇಬ್ಬರು ಮಕ್ಕಳು ನವರಾತ್ರಿಗೆಂದು ತವರು ಮನೆಗೆ ತೆರಳಿದ್ದರು. ನಿನ್ನೆ ಚರಣ್ ಅವರು ಪತ್ನಿಯ ಮನೆಗೆ ತೆರಳಿ ಮಕ್ಕಳನ್ನು ಮಾತನಾಡಿಸಿ ಬಂದಿದ್ದರಂತೆ.
ಚರಣ್ ಅವರ ತಾಯಿ ಶಾಲಾ ಬಸ್ಸಲ್ಲಿ ಕಂಡಕ್ಟರ್ ಆಗಿದ್ದು ಇಂದು ಬೆಳಗ್ಗೆ ಬೇಗನೆ ಕೆಲಸಕ್ಕೆ ತೆರಳಿದ್ದಾರೆ. ಬಳಿಕ ಚರಣ್ ಅವರು ಸಾಕು ನಾಯಿಯನ್ನ ಹಿಡಿದು ವಾಕಿಂಗ್ ತೆರಳಿದ್ದರಂತೆ. ಮಧ್ಯಾಹ್ನ ಚರಣ್ ಅವರ ಮೊಬೈಲಿಗೆ ಪತ್ನಿ ಕರೆ ಮಾಡಿದ್ದು ಸ್ವೀಕರಿಸದೇ ಇದ್ದಾಗ ಮುಚ್ಚಿಲ ಕೋಡಿಯ ನೆರೆಹೊರೆಯವರಲ್ಲಿ ವಿಚಾರಿಸಿದ್ದಾರೆ. ನೆರೆ ಹೊರೆಯವರು ಮನೆಯನ್ನ ಪರಿಶೀಲಿಸಿದಾಗ ಚರಣ್ ರಾಜ್ ನೇಣು ಬಿಗಿದಿದ್ದು ಅವರನ್ನ ರಕ್ಷಿಸಲು ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅಸುನೀಗಿದ್ದಾರೆ.
ಮೃತ ಚರಣ್ ರಾಜ್ ಅವರಿಗೆ ಆರು ತಿಂಗಳ ಮತ್ತು ಮೂರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
Ullal 37 year old Bank employee commits suicide in Mangalore , financial crises suspected. The deceased has been identified as Charan Raj Shetty (37).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm