ಬ್ರೇಕಿಂಗ್ ನ್ಯೂಸ್
14-10-22 06:25 pm Mangalore Correspondent ಕರಾವಳಿ
ಮಂಗಳೂರು, ಅ.14 : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹಿರಿಯ ನೈರ್ಮಲ್ಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಲಿಂಗ ಕೊಂಡಗುಳಿ ಎಂಬ ಭ್ರಷ್ಟ ಅಧಿಕಾರಿಯ ಮೇಲೆ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಕಪಾಳಮೋಕ್ಷ ಮಾಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದ ಕಾರಣಕ್ಕೆ ಆರೋಪಿ ಅಧಿಕಾರಿಗೆ ನಾಲ್ಕು ವರ್ಷಗಳ ಶಿಕ್ಷೆ ಮತ್ತು ಒಂದು ಕೋಟಿ ರೂಪಾಯಿ ದಂಡ ವಿಧಿಸಿದೆ.
ಶಿವಲಿಂಗ ಕೊಂಡಗುಳಿ ಭ್ರಷ್ಟ ಅಧಿಕಾರಿಯಾಗಿದ್ದಲ್ಲದೆ, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹತ್ತಾರು ವರ್ಷಗಳಿಂದ ಝಂಡಾ ಊರಿ ಲಂಚ ತಿಂದು ತೇಗಿದ್ದ. 2013ರಲ್ಲಿ ಹೆಚ್ಚಿನ ಪ್ರಮಾಣದ ಆಸ್ತಿ ಗಳಿಸಿದ್ದಾಗಿ ಖಚಿತ ಮಾಹಿತಿಗಳೊಂದಿಗೆ ಲೋಕಾಯುಕ್ತ ಅಧಿಕಾರಿಗಳು ಈತನ ಮನೆಗೆ ದಾಳಿ ನಡೆಸಿದ್ದರು. ಪರಿಶೀಲನೆ ಸಂದರ್ಭದಲ್ಲಿ ಜಮೀನು, ಬಂಗಾರ ಸೇರಿ ನಿಗದಿತ ಆದಾಯಕ್ಕಿಂತ ಹೆಚ್ಚುವರಿಯಾಗಿ 70 ಲಕ್ಷ ರೂ. ಮೌಲ್ಯದ ಆಸ್ತಿ ಗಳಿಸಿರುವುದು ಪತ್ತೆಯಾಗಿತ್ತು.

ಆಗಿನ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಜಿ. ಶೇಟ್ ತನಿಖೆ ನಡೆಸಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು, ಆರೋಪಿ ಅಧಿಕಾರಿ ಅಕ್ರಮ ಆಸ್ತಿ ಗಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅ.14 ರಂದು ತೀರ್ಪು ನೀಡಿದ್ದಾರೆ.
ಲೋಕಾಯುಕ್ತ ಕಾಯ್ದೆಯಡಿ ದಾಖಲಾದ ಸೆಕ್ಷನ್ 13(1) ಇ ಮತ್ತು ಲಂಚ ವಿರೋಧಿ ಕಾಯ್ದೆ 13(2) ಪ್ರಕರಣದಲ್ಲಿ ಆರೋಪಿ ಶಿವಲಿಂಗ ಕೊಂಡಗುಳಿಗೆ ನಾಲ್ಕು ವರ್ಷಗಳ ಸಜೆ ಪ್ರಕಟಿಸಿದ್ದಾರೆ. ಅಲ್ಲದೆ, ಅಕ್ರಮ ಗಳಿಸಿದ ಸಂಪತ್ತನ್ನು ಸರಕಾರಕ್ಕೆ ಹಿಂದಿರುಗಿಸುವ ಸಲುವಾಗಿ ಒಂದು ಕೋಟಿ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಒಂದು ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕೆಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

ಶಿವಲಿಂಗ ಕೊಂಡಗುಳಿ 2013ರಲ್ಲಿ ಒಮ್ಮೆಗೆ ಕರ್ತವ್ಯದಿಂದ ಅಮಾನತು ಆಗಿದ್ದರೂ, ಆನಂತರ ಅದೇ ಜಾಗಕ್ಕೆ ಬಂದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಒಂಬತ್ತು ವರ್ಷಗಳಿಂದಲೂ ಕರ್ತವ್ಯ ನಿರ್ವಹಿಸುತ್ತಿದ್ದ. ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಶಿವಲಿಂಗ ವಿರುದ್ಧ ಕೋರ್ಟ್ ಶಿಕ್ಷೆ ಪ್ರಕಟಿಸುತ್ತಿದ್ದಂತೆ ಭ್ರಷ್ಟ ಅಧಿಕಾರಿಯನ್ನು ಪೊಲೀಸರು ಕೈತೋಳ ತೊಡಿಸಿ ಜೈಲಿಗೆ ಒಯ್ದಿದ್ದಾರೆ.
Mangalore MCC corrupted officer Shivalinga punished with four years of jail and one crore fine.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm