ಬ್ರೇಕಿಂಗ್ ನ್ಯೂಸ್
14-10-22 06:25 pm Mangalore Correspondent ಕರಾವಳಿ
ಮಂಗಳೂರು, ಅ.14 : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹಿರಿಯ ನೈರ್ಮಲ್ಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಲಿಂಗ ಕೊಂಡಗುಳಿ ಎಂಬ ಭ್ರಷ್ಟ ಅಧಿಕಾರಿಯ ಮೇಲೆ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಕಪಾಳಮೋಕ್ಷ ಮಾಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದ ಕಾರಣಕ್ಕೆ ಆರೋಪಿ ಅಧಿಕಾರಿಗೆ ನಾಲ್ಕು ವರ್ಷಗಳ ಶಿಕ್ಷೆ ಮತ್ತು ಒಂದು ಕೋಟಿ ರೂಪಾಯಿ ದಂಡ ವಿಧಿಸಿದೆ.
ಶಿವಲಿಂಗ ಕೊಂಡಗುಳಿ ಭ್ರಷ್ಟ ಅಧಿಕಾರಿಯಾಗಿದ್ದಲ್ಲದೆ, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹತ್ತಾರು ವರ್ಷಗಳಿಂದ ಝಂಡಾ ಊರಿ ಲಂಚ ತಿಂದು ತೇಗಿದ್ದ. 2013ರಲ್ಲಿ ಹೆಚ್ಚಿನ ಪ್ರಮಾಣದ ಆಸ್ತಿ ಗಳಿಸಿದ್ದಾಗಿ ಖಚಿತ ಮಾಹಿತಿಗಳೊಂದಿಗೆ ಲೋಕಾಯುಕ್ತ ಅಧಿಕಾರಿಗಳು ಈತನ ಮನೆಗೆ ದಾಳಿ ನಡೆಸಿದ್ದರು. ಪರಿಶೀಲನೆ ಸಂದರ್ಭದಲ್ಲಿ ಜಮೀನು, ಬಂಗಾರ ಸೇರಿ ನಿಗದಿತ ಆದಾಯಕ್ಕಿಂತ ಹೆಚ್ಚುವರಿಯಾಗಿ 70 ಲಕ್ಷ ರೂ. ಮೌಲ್ಯದ ಆಸ್ತಿ ಗಳಿಸಿರುವುದು ಪತ್ತೆಯಾಗಿತ್ತು.

ಆಗಿನ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಜಿ. ಶೇಟ್ ತನಿಖೆ ನಡೆಸಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು, ಆರೋಪಿ ಅಧಿಕಾರಿ ಅಕ್ರಮ ಆಸ್ತಿ ಗಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅ.14 ರಂದು ತೀರ್ಪು ನೀಡಿದ್ದಾರೆ.
ಲೋಕಾಯುಕ್ತ ಕಾಯ್ದೆಯಡಿ ದಾಖಲಾದ ಸೆಕ್ಷನ್ 13(1) ಇ ಮತ್ತು ಲಂಚ ವಿರೋಧಿ ಕಾಯ್ದೆ 13(2) ಪ್ರಕರಣದಲ್ಲಿ ಆರೋಪಿ ಶಿವಲಿಂಗ ಕೊಂಡಗುಳಿಗೆ ನಾಲ್ಕು ವರ್ಷಗಳ ಸಜೆ ಪ್ರಕಟಿಸಿದ್ದಾರೆ. ಅಲ್ಲದೆ, ಅಕ್ರಮ ಗಳಿಸಿದ ಸಂಪತ್ತನ್ನು ಸರಕಾರಕ್ಕೆ ಹಿಂದಿರುಗಿಸುವ ಸಲುವಾಗಿ ಒಂದು ಕೋಟಿ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಒಂದು ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕೆಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

ಶಿವಲಿಂಗ ಕೊಂಡಗುಳಿ 2013ರಲ್ಲಿ ಒಮ್ಮೆಗೆ ಕರ್ತವ್ಯದಿಂದ ಅಮಾನತು ಆಗಿದ್ದರೂ, ಆನಂತರ ಅದೇ ಜಾಗಕ್ಕೆ ಬಂದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಒಂಬತ್ತು ವರ್ಷಗಳಿಂದಲೂ ಕರ್ತವ್ಯ ನಿರ್ವಹಿಸುತ್ತಿದ್ದ. ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಶಿವಲಿಂಗ ವಿರುದ್ಧ ಕೋರ್ಟ್ ಶಿಕ್ಷೆ ಪ್ರಕಟಿಸುತ್ತಿದ್ದಂತೆ ಭ್ರಷ್ಟ ಅಧಿಕಾರಿಯನ್ನು ಪೊಲೀಸರು ಕೈತೋಳ ತೊಡಿಸಿ ಜೈಲಿಗೆ ಒಯ್ದಿದ್ದಾರೆ.
Mangalore MCC corrupted officer Shivalinga punished with four years of jail and one crore fine.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm