ಬ್ರೇಕಿಂಗ್ ನ್ಯೂಸ್
14-10-22 07:53 pm Mangalore Correspondent ಕರಾವಳಿ
ಮಂಗಳೂರು, ಅ.14 : ಸುರತ್ಕಲ್ ಟೋಲ್ ಗೇಟ್ ತೆರವು ಮಾಡಲೇಬೇಕೆಂದು ವಿರೋಧಿ ಹೋರಾಟ ಕಾವು ಪಡೆಯುತ್ತಿದ್ದಂತೆ ಜಿಲ್ಲಾಡಳಿತ ಎಚ್ಚತ್ತುಕೊಂಡಿದೆ. ಅಕ್ಟೋಬರ್ 18ರಂದು ಟೋಲ್ ಗೇಟ್ ಮುತ್ತಿಗೆ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಒಕ್ಕೊರಳ ಆಗ್ರಹ ಮುಂದಿಟ್ಟಿದ್ದಾರೆ. ಈ ನಡುವೆ, ಜಿಲ್ಲಾಡಳಿತ ಸಂಘಟನೆ ನಾಯಕರ ಜೊತೆಗೆ ನಡೆಸಿದ ಮಾತುಕತೆಯೂ ವಿಫಲವಾಗಿದೆ. ಹೆದ್ದಾರಿ ಅಧಿಕಾರಿಗಳು ಶೀಘ್ರದಲ್ಲೇ ಟೋಲ್ ಗೇಟ್ ತೆರವು ಮಾಡುತ್ತೇವೆಂದು ಜಿಲ್ಲಾಧಿಕಾರಿ ಜೊತೆಗಿನ ಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ನಿಶ್ಚಿತ ದಿನಾಂಕ ಪ್ರಕಟಿಸದೆ ಮೀನ ಮೇಷದ ಹೇಳಿಕೆಯನ್ನು ನಂಬುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.
ಶುಕ್ರವಾರ ಜಿಲ್ಲಾಡಳಿತದ ಪರವಾಗಿ ಪಣಂಬೂರು ಎಸಿಪಿ ಕಚೇರಿಯಲ್ಲಿ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಸಿಪಿ ಮಹೇಶ್ ಕುಮಾರ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಸಭೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾಡಳಿತದ ಕಡೆಯಿಂದ ಅದೇ ಹಳೇ ರಾಗವನ್ನು ಮುಂದಿಡಲಾಗಿತ್ತು. ಸುರತ್ಕಲ್ ಟೋಲ್ ಗೇಟ್ ತೆರವು ಪ್ರಕ್ರಿಯೆಯ ಆಡಳಿತಾತ್ಮಕ ಕೆಲಸ ನಡೆಯುತ್ತಿದೆ. ತೆರವುಗೊಳಿಸಲು ತೀರ್ಮಾನ ಆಗಿದೆ. ಇನ್ನು ಕೆಲವು ದಿನಗಳಲ್ಲಿ ತೆರವು ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಅಲ್ಲಿಯವರೆಗೆ ಹೋರಾಟ ಕೈ ಬಿಡುವಂತೆ ಹೋರಾಟ ಸಮಿತಿಯನ್ನು ಅಧಿಕಾರಿಗಳು ವಿನಂತಿಸಿದರು. ಟೋಲ್ ತೆರವಿನ ನಿರ್ದಿಷ್ಟ ದಿನಾಂಕ ಪ್ರಕಟಿಸದೆ ಎಂದಿನಂತೆ ಕೆಲವೇ ದಿನಗಳಲ್ಲಿ ತೆರವು ಎಂಬ ಬಾಯಿ ಮಾತಿನ ಭರವಸೆ ಮಾತ್ರ ನೀಡಲಾಯಿತು.
ಕೇವಲ ಭರವಸೆ ಕಾರಣಕ್ಕೆ ಹೋರಾಟ ಕೈಬಿಡಲ್ಲ
ಕಳೆದ ಆರು ವರ್ಷಗಳಲ್ಲಿ ಟೋಲ್ ಗೇಟ್ ತೆರವಿನ ಬಗ್ಗೆ ಹಲವು ಭರವಸೆಗಳನ್ನು ನೀಡಲಾಗಿದೆ. ಜನಪ್ರತಿನಿಧಿಗಳು, ವಿಧಾನಸಭೆಯಲ್ಲಿಯೂ ತಿಂಗಳೊಳಗೆ ಟೋಲ್ ಗೇಟ್ ತೆರವು ಎಂಬ ಹೇಳಿಕೆ ನೀಡಿದ್ದಾರೆ. ಆದರೆ ಆ ಹೇಳಿಕೆಗಳು ಜಾರಿಗೆ ಬಂದಿಲ್ಲ. ಈಗಲೂ ಭರವಸೆ ಜಾರಿಗೆ ಬರುತ್ತದೆ ಎಂಬ ವಿಶ್ವಾಸ ಜನತೆಗೆ ಇಲ್ಲ. ಆದುದರಿಂದ ಟೋಲ್ ಸಂಗ್ರಹ ಸ್ಥಗಿತಗೊಳ್ಳದೆ ಹೋರಾಟ ಹಿಂಪಡೆಯಲು ಸಾಧ್ಯವಿಲ್ಲ. ಎರಡೂ ಜಿಲ್ಲೆಗಳ ನೂರಾರು ಸಂಘಟನೆಗಳು ಅಕ್ಟೋಬರ್ 18 ರ ಮುತ್ತಿಗೆ ತೀರ್ಮಾನವನ್ನು ಬೆಂಬಲಿಸಿವೆ. ಟೋಲ್ ಸಂಗ್ರಹ ಸ್ಥಗಿತಗೊಳ್ಳದೆ, ಕೇವಲ ಭರವಸೆ ಆಧಾರದಲ್ಲಿ ಹೋರಾಟ ಮುಂದೂಡಲು ಜನತೆ ಒಪ್ಪವುದಿಲ್ಲ ಎಂದು ಹೋರಾಟ ಸಮಿತಿ ಪರವಾಗಿ ಪಾಲ್ಗೊಂಡಿದ್ದವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಟೋಲ್ ಸಂಗ್ರಹ ತಕ್ಷಣ ಕೈಬಿಡಿ
ಆದುದರಿಂದ ಟೋಲ್ ಸಂಗ್ರಹವನ್ನು ತಕ್ಷಣ ಕೈಬಿಡಬೇಕು. ಸರಕಾರದ ಹೇಳಿಕೆಯ ಪ್ರಕಾರ ಇನ್ನು ಕೆಲವೇ ದಿನದಲ್ಲಿ ತೆರವಿಗೆ ಬೇಕಾದ ಪ್ರಕ್ರಿಯೆ ಪೂರ್ಣಗೊಳ್ಳುವುದಾದರೆ, ಅಲ್ಲಿಯವರೆಗೆ ಟೋಲ್ ಸಂಗ್ರಹವನ್ನು ಕೈಬಿಡಿ. ಅದರಿಂದ ದೊಡ್ಡ ನಷ್ಟವೇನೂ ಆಗುವುದಿಲ್ಲ. ಏಳು ವರ್ಷಗಳಿಂದ ನೂರಾರು ಕೋಟಿ ರೂಪಾಯಿ ಸುರತ್ಕಲ್ ಟೋಲ್ ಗೇಟ್ ಹೆಸರಲ್ಲಿ ಸಂಗ್ರಹಿಸಲಾಗಿದೆ. ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಶಾಂತಿಯುತ ನಡೆಸಲಿದ್ದೇವೆ. ಟೋಲ್ ಸಂಗ್ರಹ ಸ್ಥಗಿತಗೊಂಡಿರುವುದು ಖಾತರಿಗೊಳ್ಳುವ ವರೆಗೆ ಮುತ್ತಿಗೆ ಮುಂದುವರಿಯಲಿದೆ. ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹ ಸ್ಥಗಿತಗೊಳ್ಳದೆ ಈ ಬಾರಿಯ ಹೋರಾಟ ಮುಗಿಯುವುದಿಲ್ಲ ಎಂದು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.
Mangalore October 18th last date for vacating illegal Surathkal toll warns DYFI.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am