ಬ್ರೇಕಿಂಗ್ ನ್ಯೂಸ್
14-10-22 08:36 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿದ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಫಳ್ನೀರ್ ನಿವಾಸಿ ರಿಯಾಜ್ ಮತ್ತು ಆತ ಚಲಾಯಿಸುತ್ತಿದ್ದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆತನ ಕಾರನ್ನು ಮುಂದಕ್ಕೆ ರಸ್ತೆಯಲ್ಲಿ ಓವರ್ ಟೇಕ್ ಮಾಡಿ ಹೋಗಲು ಬಿಡದೇ ಇದ್ದುದಕ್ಕೆ ಬೈದುಕೊಂಡು ತೆರಳಿದ್ದಾಗಿ ಪೊಲೀಸರಲ್ಲಿ ತಿಳಿಸಿದ್ದಾನೆ. ಕಾರಿನಲ್ಲಿ ಶಾಸಕರಿದ್ದ ಬಗ್ಗೆ ತಿಳಿದಿರಲಿಲ್ಲ ಎಂದಿದ್ದಾನೆ. ಕಾರಿನಲ್ಲಿ ಯಾವುದೇ ಆಯುಧ ಸಿಕ್ಕಿಲ್ಲ. ಅಲ್ಲದೆ, ಆರೋಪಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಶಾಸಕ ಹರೀಶ್ ಪೂಂಜ ಗುರುವಾರ ರಾತ್ರಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದಾಗ ಫರಂಗಿಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರು ತೋರಿಸಿದ್ದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದರು. ಈ ಬಗ್ಗೆ ಹೇಳಿಕೆ ನೀಡಿದ್ದ ಹರೀಶ್ ಪೂಂಜ, ಜಿಹಾದಿಗಳಿಗೆ ಹೆದರಲ್ಲ. ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬೆದರಿಕೆ ಹಾಕಿದ್ದಾರೆ. ಗೃಹ ಸಚಿವರು ಫೋನ್ ಮಾಡಿ ಭದ್ರತೆ ನೀಡುವುದಾಗಿ ತಿಳಿಸಿದ್ದಾರೆಂದು ಹೇಳಿದ್ದರು. ಕೇರಳ ನೋಂದಣಿಯ ಕಾರು ಅದಾಗಿತ್ತು ಎಂದೂ ಹೇಳಿದ್ದರು.
ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಾಸಕರಿಗೆ ಬೆದರಿಕೆ ಹಾಕುವ ಉದ್ದೇಶ ಇರಲಿಲ್ಲ ಎನ್ನುವುದು ಮೇಲ್ನೋಟಕ್ಕೆ ಪೊಲೀಸರಿಗೆ ದೃಢಪಟ್ಟಿದೆ. ಶಾಸಕರು ಎಸ್ಕಾರ್ಟ್ ಪಡೆಯಲು ಈ ರೀತಿ ಬೆದರಿಕೆ ನಾಟಕ ಮಾಡಿದ್ದಾರೆ ಎಂದೂ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿಬಂದಿದ್ದವು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಬೆದರಿಕೆ ; ಫರಂಗಿಪೇಟೆ ಹೆದ್ದಾರಿಯಲ್ಲಿ ಕೃತ್ಯ
MLA Harish Poonja shown followed by unidentified car, car seized one held in Mangalore. The police have detained one person in connection with allegedly waylaying the car of Beltangady MLA Harish Poonja and flashing swords.The white Scorpio used for reportedly used for chasing the MLA's vehicle has also been seized.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm