ಬ್ರೇಕಿಂಗ್ ನ್ಯೂಸ್
14-10-22 08:36 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿದ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಫಳ್ನೀರ್ ನಿವಾಸಿ ರಿಯಾಜ್ ಮತ್ತು ಆತ ಚಲಾಯಿಸುತ್ತಿದ್ದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆತನ ಕಾರನ್ನು ಮುಂದಕ್ಕೆ ರಸ್ತೆಯಲ್ಲಿ ಓವರ್ ಟೇಕ್ ಮಾಡಿ ಹೋಗಲು ಬಿಡದೇ ಇದ್ದುದಕ್ಕೆ ಬೈದುಕೊಂಡು ತೆರಳಿದ್ದಾಗಿ ಪೊಲೀಸರಲ್ಲಿ ತಿಳಿಸಿದ್ದಾನೆ. ಕಾರಿನಲ್ಲಿ ಶಾಸಕರಿದ್ದ ಬಗ್ಗೆ ತಿಳಿದಿರಲಿಲ್ಲ ಎಂದಿದ್ದಾನೆ. ಕಾರಿನಲ್ಲಿ ಯಾವುದೇ ಆಯುಧ ಸಿಕ್ಕಿಲ್ಲ. ಅಲ್ಲದೆ, ಆರೋಪಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಶಾಸಕ ಹರೀಶ್ ಪೂಂಜ ಗುರುವಾರ ರಾತ್ರಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದಾಗ ಫರಂಗಿಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರು ತೋರಿಸಿದ್ದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದರು. ಈ ಬಗ್ಗೆ ಹೇಳಿಕೆ ನೀಡಿದ್ದ ಹರೀಶ್ ಪೂಂಜ, ಜಿಹಾದಿಗಳಿಗೆ ಹೆದರಲ್ಲ. ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬೆದರಿಕೆ ಹಾಕಿದ್ದಾರೆ. ಗೃಹ ಸಚಿವರು ಫೋನ್ ಮಾಡಿ ಭದ್ರತೆ ನೀಡುವುದಾಗಿ ತಿಳಿಸಿದ್ದಾರೆಂದು ಹೇಳಿದ್ದರು. ಕೇರಳ ನೋಂದಣಿಯ ಕಾರು ಅದಾಗಿತ್ತು ಎಂದೂ ಹೇಳಿದ್ದರು.
ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಾಸಕರಿಗೆ ಬೆದರಿಕೆ ಹಾಕುವ ಉದ್ದೇಶ ಇರಲಿಲ್ಲ ಎನ್ನುವುದು ಮೇಲ್ನೋಟಕ್ಕೆ ಪೊಲೀಸರಿಗೆ ದೃಢಪಟ್ಟಿದೆ. ಶಾಸಕರು ಎಸ್ಕಾರ್ಟ್ ಪಡೆಯಲು ಈ ರೀತಿ ಬೆದರಿಕೆ ನಾಟಕ ಮಾಡಿದ್ದಾರೆ ಎಂದೂ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿಬಂದಿದ್ದವು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಬೆದರಿಕೆ ; ಫರಂಗಿಪೇಟೆ ಹೆದ್ದಾರಿಯಲ್ಲಿ ಕೃತ್ಯ
MLA Harish Poonja shown followed by unidentified car, car seized one held in Mangalore. The police have detained one person in connection with allegedly waylaying the car of Beltangady MLA Harish Poonja and flashing swords.The white Scorpio used for reportedly used for chasing the MLA's vehicle has also been seized.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm