ಬ್ರೇಕಿಂಗ್ ನ್ಯೂಸ್
14-10-22 10:38 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿದ ಘಟನೆ ಕೊಲೆ ಯತ್ನ ಅಥವಾ ದಾಳಿ ನಡೆಸಿದ್ದಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂದು ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆಯಲ್ಲಿ ಸ್ಕಾರ್ಪಿಯೋ ಕಾರು ಮತ್ತು ಅದರ ಚಾಲಕನಾಗಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ಈ ಬಗ್ಗೆ ಮಾಹಿತಿ ನೀಡಿದ್ದ ಎಸ್ಪಿ ಸೋನವಾಣೆ, ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಅಲ್ಲದೆ, ಆತನ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ಆರೋಪಿ ತನ್ನ ಕಾರಿನ ಮೇಲೆ ತಲವಾರು ಝಳಪಿಸಿದ್ದ ಎಂದು ಹರೀಶ್ ಪೂಂಜಾ ದೂರಿದ್ದರು. ಅಲ್ಲದೆ, ಶಾಸಕರ ಕಾರು ಚಾಲಕ ನವೀನ್ ನೀಡಿದ್ದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವರು ಶಾಸಕ ಪೂಂಜಾಗೆ ಗನ್ ಮ್ಯಾನ್ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು.
ಇದೀಗ ಘಟನೆ ಬಗ್ಗೆ ದ.ಕ. ಎಸ್ಪಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಸರ್ಕಾರದಿಂದ ಕಳುಹಿಸಿದ್ದ ಗನ್ ಮ್ಯಾನ್ ಅನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ. ಗೃಹ ಸಚಿವರ ಸೂಚನೆಯಂತೆ ಗನ್ ಮ್ಯಾನ್ ನೀಡಲಾಗಿತ್ತು. ಇದು ಕೊಲೆಯತ್ನ ಅಲ್ಲ, ಕೇವಲ ರೋಡ್ ರೇಜ್ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದರಿಂದ ಮುಜುಗರಗೊಂಡ ಹರೀಶ್ ಪೂಂಜಾ ಸರ್ಕಾರದಿಂದ ಒದಗಿಸಿದ್ದ ಗನ್ ಮ್ಯಾನನ್ನು ವಾಪಸ್ ಕಳುಹಿಸಿದ್ದಾರೆ.
MLA chased by Suspicious Scorpio car was just a road rage, no weapons were found clarifies SP of Mangalore.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm