ಕರಾವಳಿಯಲ್ಲಿಂದು 316 ಮಂದಿಗೆ ಸೋಂಕು ; ಈವರೆಗೆ 21,461 ಮಂದಿ ಸೋಂಕಿನಿಂದ ಗುಣಮುಖ

10-10-20 09:42 pm       Mangaluru Correspondent   ಕರಾವಳಿ

ದ.ಕ.ಜಿಲ್ಲೆಯಲ್ಲಿ ಈವರೆಗೆ 21,461 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಶನಿವಾರ ನಾಲ್ಕು ಮಂದಿ ಮೃತಪಡುವುದರೊಂದಿಗೆ ಈವರೆಗೆ ಕೊರೋನಕ್ಕೆ ಬಲಿಯಾದವರ ಸಂಖ್ಯೆ 600ಕ್ಕೇರಿದೆ.

ಮಂಗಳೂರು, ಅ.10: ಕೋವಿಡ್ -19ಗೆ ದ.ಕ.ಜಿಲ್ಲೆಯಲ್ಲಿ ಶನಿವಾರ ನಾಲ್ಕು ಮಂದಿ ಮೃತಪಡುವುದರೊಂದಿಗೆ ಈವರೆಗೆ ಕೊರೋನಕ್ಕೆ ಬಲಿಯಾದವರ ಸಂಖ್ಯೆ 600ಕ್ಕೇರಿದೆ.

ಅಲ್ಲದೆ ಶನಿವಾರ ಜಿಲ್ಲೆಯ 316 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು, 607 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಈವರೆಗಿನ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1,93,669 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 1,67,405 ಮಂದಿಯ ವರದಿ ನೆಗೆಟಿವ್ ಮತ್ತು 26,264 ಮಂದಿಯ ವರದಿ ಪಾಸಿಟಿವ್ ಬಂದಿದೆ. 21,461 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 4,203 ಸಕ್ರಿಯ ಪ್ರಕರಣಗಳಿವೆ.

6,221 ಮಾಸ್ಕ್ ಉಲ್ಲಂಘನೆ ಪ್ರಕರಣ:

ರಾಜ್ಯ ಮತ್ತು ಕೇಂದ್ರ ಸರಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 6,221 ಪ್ರಕರಣ ದಾಖಲಿಸಲಾಗಿದ್ದು, 7,70,835 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Dakshina Kannada reported 316 fresh coronavirus cases and four deaths on Saturday. As many as 21,461 patients have recovered and been discharged from hospital so far.