ಬ್ರೇಕಿಂಗ್ ನ್ಯೂಸ್
15-10-22 09:52 pm Mangalore Correspondent ಕರಾವಳಿ
ಉಳ್ಳಾಲ, ಅ.15 : ಮುನ್ನೂರು ಗ್ರಾಮ ಪಂಚಾಯತ್ ಆಡಳಿತದಲ್ಲಿ ಅವ್ಯವಹಾರಗಳೇ ತುಂಬಿದ್ದು, ಭಂಡಾರಬೈಲು ಸಮೀಪ ಅಕ್ರಮವಾಗಿ ಮರ ಕಡಿದು ಮಾರಾಟ ಮಾಡಿದ್ದಲ್ಲದೆ ರೈತರ ಕುಮ್ಕಿ ಜಾಗದ ಕುರಿತಾಗಿ ಸರಿಯಾದ ಕಾನೂನು ಜಾರಿ ಬರೋದಕ್ಕೂ ಮುನ್ನವೇ ರೈತರೊಬ್ಬರ ಕುಮ್ಕಿ ಜಾಗವನ್ನು ಸರಕಾರಿ ಜಾಗ ಎಂದು ಅತಿಕ್ರಮಣ ಮಾಡಿದ್ದು ಅಪರಾಧಿಗಳಿಗೆ ಕಾನೂನು ಪ್ರಕಾರ ತಕ್ಕ ಶಾಸ್ತಿ ಆಗುವ ತನಕ ಹೋರಾಟ ನಿಲ್ಲದು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ ಹೇಳಿದರು.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ ಪಂಚಾಯತ್ ಆಡಳಿತವು ರೈತ ವಿರೋಧಿ ಆಡಳಿತ ನಡೆಸುತ್ತಾ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಭ್ರಷ್ಟರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಉಳ್ಳಾಲ ಘಟಕದ ವತಿಯಿಂದ ಮುನ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಶನಿವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರೈತರು ಒಗ್ಗಟ್ಟಾಗಿ ಜಾಗೃತರಾಬೇಕು. ಪರಿಸ್ಥಿತಿ ಹೇಗಿದೆ ಎಂದರೆ ಈ ಭ್ರಷ್ಟರಿಂದಾಗಿ ನಮ್ಮ ಭೂಮಿಯನ್ನು ಉಳಿಸಲು ನಾವು ಹೋರಾಟ ಮಾಡುವಂತಾಗಿದೆ ಎಂದರು. ಪಂಚಾಯತ್ ಅಧಿಕಾರಿಗಳಿಗೆ ಆರೋಗ್ಯ ಕೆಟ್ಟರೆ ಅವರ ಆಸ್ಪತ್ರೆ ಖರ್ಚನ್ನು ಸರಕಾರ ಭರಿಸುತ್ತದೆ, ಆದರೆ ದೇಶದ ಜನತೆಯ ಹೊಟ್ಟೆ ತುಂಬಿಸುವ ರೈತನ ಗೋಳನ್ನು ಯಾರಲ್ಲಿ ಹೇಳೋದು ಎಂದು ಪ್ರಶ್ನಿಸಿದರು.

ರೈತರ ಕುಮ್ಕಿ ಜಾಗದ ಕುರಿತಾದ ನೂತನ ಕಾನೂನು ಶೀಘ್ರದಲ್ಲೇ ಜಾರಿಗೆ ಬರಲಿದೆ. ಕುಮ್ಕಿ ಹಕ್ಕು ಇತ್ಯರ್ಥವಾಗುವುದಕ್ಕೆ ಮುನ್ನವೇ ಸರಕಾರಿ ಜಮೀನು ಎಂದು ಅತಿಕ್ರಮಣ ಮಾಡಿರುವ ಮುನ್ನೂರು ಗ್ರಾಮ ಪಂಚಾಯತ್ ಆಡಳಿತದಲ್ಲಿ ಭ್ರಷ್ಟಾಚಾರಗೈದವರೆಲ್ಲರಿಗೂ ಶಿಕ್ಷೆ ಆಗಲಿದೆ ಎಂದರು.
ಕಿಸಾನ್ ಸಂಘ ಮುನ್ನೂರು ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಶೆಟ್ಟಿ, ಮುಖಂಡರಾದ ಪ್ರೇಮಚಂದ್ರ ಶೆಟ್ಟಿ, ಶಿವರಾಜ್ ಕಾವ, ಬಾಬು ಶ್ರೀಶಾಸ್ತಾ ಕಿನ್ಯ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
Mangalore Illegal sand mining in Ullal, farmers land being used for mining at Munnuru, farmers protest.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am