ಬ್ರೇಕಿಂಗ್ ನ್ಯೂಸ್
16-10-22 12:18 pm Mangalore Correspondent ಕರಾವಳಿ
ಮಂಗಳೂರು, ಅ.16 : ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟವನ್ನು ಹತ್ತಿಕ್ಕಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಅ.18ರ ಹೋರಾಟಕ್ಕೆ ಭಾರೀ ಜನಬೆಂಬಲ ವ್ಯಕ್ತವಾಗಿರುವುದರಿಂದ ಪೊಲೀಸರು ಹೋರಾಟದ ಮುಂಚೂಣಿಯಲ್ಲಿರುವ ಪ್ರಮುಖರನ್ನು ಟಾರ್ಗೆಟ್ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಪ್ರಮುಖರ ಮನೆಗಳಿಗೆ ನುಗ್ಗಿ ನೊಟೀಸ್ ನೀಡತೊಡಗಿದ್ದಾರೆ. ಹೋರಾಟ ಕೈಬಿಡುವಂತೆ ಬಾಂಡ್ ಬರೆದುಕೊಡುವಂತೆ ತಾಕೀತು ಮಾಡಿದ್ದಾರೆ.
ಎರಡು ಲಕ್ಷ ರೂಪಾಯಿ ಬಾಂಡ್ ಕೊಡಬೇಕು, ಸರ್ಕಾರಿ ಅಧಿಕಾರಿಯ ಜಾಮೀನಿನೊಂದಿಗೆ ಪೊಲೀಸ್ ಕಮಿಷನರ್ ಕಚೇರಿಗೆ ಹಾಜರಾಗುವಂತೆ ಸುರತ್ಕಲ್ ಪೊಲೀಸರು ಸೂಚನೆ ನೀಡಿದ್ದಾರೆ. ಅಕ್ಟೋಬರ್ 18ರಂದು ಸುರತ್ಕಲ್ ಟೋಲ್ ತೆರವುಗೊಳಿಸುವ ನಿರ್ಣಾಯಕ ಹೋರಾಟಕ್ಕೆ ಕರೆ ನೀಡಿದ್ದು ಅಂದು ಸಾವಿರಾರು ಜನರು ಮುತ್ತಿಗೆ ಹಾಕಿ ಟೋಲ್ ಗೇಟ್ ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಈ ನಡುವೆ, ಜಿಲ್ಲಾಡಳಿತ ಹೆದ್ದಾರಿ ಅಧಿಕಾರಿಗಳ ಜೊತೆ ಮತ್ತು ಹೋರಾಟಗಾರರ ಜೊತೆಗೆ ಮಾತುಕತೆ ನಡೆಸಿತ್ತು. ಆದರೆ, ಹೋರಾಟಗಾರರು ಟೋಲ್ ಗೇಟ್ ತೆರವಿಗೆ ದಿನಾಂಕ ಘೋಷಿಸದ ಹೊರತು ಪ್ರತಿಭಟನೆ ಕೈಬಿಡಲ್ಲ ಎಂದಿದ್ದರು.
ಹೋರಾಟಕ್ಕೆ ಬಿಜೆಪಿ ಹೊರತುಪಡಿಸಿ ಉಳಿದೆಲ್ಲ ರಾಜಕೀಯ ಪಕ್ಷಗಳು, ಹಲವಾರು ಸಂಘ- ಸಂಸ್ಥೆಗಳು ಬೆಂಬಲ ನೀಡಿದ್ದು ಬಿಜೆಪಿ ಸರ್ಕಾರವ ಮೇಲೆ ತೀವ್ರ ಒತ್ತಡಕ್ಕೆ ಬಿದ್ದಿದೆ. ಸುರತ್ಕಲ್, ಮೂಡುಬಿದ್ರೆ, ಮೂಲ್ಕಿ, ಮಂಗಳೂರಿನ ವಿವಿಧೆಡೆ ಪ್ರಚಾರ ಅಭಿಯಾನ ನಡೆದಿದ್ದು ಐದು ಸಾವಿರಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಕಂಡುಬಂದಿದೆ. ಇದರಿಂದಾಗಿ ಹೋರಾಟವನ್ನೇ ಹತ್ತಿಕ್ಕುವ ಸರ್ವಾಧಿಕಾರಿ ಧೋರಣೆಯನ್ನು ಮಂಗಳೂರು ಪೊಲೀಸರ ಮೂಲಕ ಮಾಡಲಾಗುತ್ತಿದೆ. ರಾತ್ರೋರಾತ್ರಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು ಮಹಿಳಾ ಹೋರಾಟಗಾರರ ಮನೆಗೆ ಮಧ್ಯರಾತ್ರಿ ತೆರಳಿ ನೋಟೀಸ್ ನೀಡಿದ್ದಾರೆ. ಕಾಂಗ್ರೆಸ್ ನಾಯಕಿ, ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಮನೆಗೂ ಮಧ್ಯರಾತ್ರಿ 11.45ರ ವೇಳೆಗೆ ಹೋಗಿದ್ದಾರೆ. ಇವರಲ್ಲದೆ, ಹೋರಾಟಕ್ಕೆ ಕೈಜೋಡಿಸಿರುವ ಸಾಮಾನ್ಯ ಮಹಿಳೆಯರು, ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಪ್ರಮುಖರ ಮನೆಗಳಿಗೆ ಪೊಲೀಸರು ರಾತ್ರಿ ವೇಳೆ ತೆರಳಿ ನೋಟೀಸ್ ನೀಡಿದ್ದಾರೆ. ಆಮೂಲಕ ಹೋರಾಟಕ್ಕೆ ಮುಂದಾಗಿರುವವರ ಮೇಲೆ ಬೆದರಿಸುವ ತಂತ್ರ ಮಾಡಿದ್ದಾರೆ.
ಈ ಬಗ್ಗೆ ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಬಳಿ ಕೇಳಿದಾಗ, ನೋಟೀಸ್ ಕೊಟ್ಟಿರುವುದು ಮಾತ್ರ. ಅವರು ಬಹಿರಂಗವಾಗಿಯೇ ಟೋಲ್ ಗೇಟ್ ತೆರವು ಮಾಡುತ್ತೇವೆ ಎಂದು ಹೇಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದು, ಶಾಂತಿ ಭಂಗ ಮಾಡುವ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ಎಚ್ಚರಿಕೆ ನೋಟಿಸ್ ಕೊಡುತ್ತಿದ್ದೇವೆ. ಮಧ್ಯರಾತ್ರಿ ಮನೆಗೆ ಹೋಗಿರುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.
Police have cracked down on protesters of the Surathkal toll gate and have slapped notices forcibly on more than 100 of them by conducting a search and barging into homes in a midnight operation. The police have ordered the protesters to furnish a bond for Rs 2 lacs along with a government bail and also to report themselves at the Police Commissioner's office on Monday.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am