ಬ್ರೇಕಿಂಗ್ ನ್ಯೂಸ್
16-10-22 04:48 pm Mangalore Correspondent ಕರಾವಳಿ
ಮಂಗಳೂರು, ಅ.16 : ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ದ್ವಾರದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯ ಸಿಬಂದಿಗೆ ಮಾತ್ರ ಪ್ರವೇಶ ಎಂದು ಬೋರ್ಡ್ ಹಾಕಲಾಗಿದೆ. ಈ ಬಗ್ಗೆ ವಕೀಲರ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾಯಾಲಯ ಕಟ್ಟಡವು ಸಾರ್ವಜನಿಕರಿಗೆ ಮುಕ್ತ ಪ್ರವೇಶ ಹೊಂದಿರುವ ಕಟ್ಟಡವಾಗಿದ್ದರೂ ಜಿಲ್ಲಾ ನ್ಯಾಯಾಧೀಶರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರವನ್ನು ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಎನ್ನುವ ನಿರ್ಬಂಧ ಹಾಕಿರುವುದು ವಕೀಲ ಸಮುದಾಯದಲ್ಲಿ ಅಸಮಾಧಾನ ತರಿಸಿದೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯವಾದಿಗಳಿಗೂ ಪ್ರವೇಶ ನಿರ್ಬಂಧಿಸಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.
ಈ ಬಗ್ಗೆ ಶನಿವಾರ ಕಟ್ಟಡದ ಮುಂಭಾಗದ ಪ್ರಮುಖ ದ್ವಾರದಲ್ಲಿ ಈ ರೀತಿ ಬೋರ್ಡ್ ಹಾಕಿರುವುದು ತಿಳಿಯುತ್ತಿದ್ದಂತೆ ವಕೀಲರ ಸಂಘದ ಪ್ರತಿನಿಧಿಗಳು ಮುಖ್ಯ ನ್ಯಾಯಾಧೀಶರನ್ನು ಭೇಟಿಯಾಗಿದ್ದಾರೆ. ಭದ್ರತೆ ಸಲುವಾಗಿ ಈ ರೀತಿಯ ನಿರ್ಣಯ ಮಾಡಲಾಗಿದೆ. ಅದನ್ನು ನೀವು ಪ್ರಶ್ನೆ ಮಾಡುವಂತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆಂದು ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ತಿಳಿಸಿದ್ದಾರೆ.
ಈ ಬಗ್ಗೆ ಅ.18ರಂದು ವಕೀಲರ ಸಂಘದ ಎಲ್ಲ ಸದಸ್ಯರ ಸಭೆಯನ್ನು ಕರೆಯಲಾಗಿದ್ದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ವಕೀಲರು ನ್ಯಾಯಾಂಗದ ಭಾಗ ಆಗಿರುವಾಗ 30 ಮಂದಿ ನ್ಯಾಯಾಧೀಶರ ಸಲುವಾಗಿ ಮುಖ್ಯ ಪ್ರವೇಶವನ್ನೇ ನಿರ್ಬಂಧಿಸಿದ್ದು ಸರಿಯಲ್ಲ. ಈ ರೀತಿ ನಿರ್ಣಯ ಯಾಕೆ ಕೈಗೊಂಡಿದ್ದಾರೆ ಎನ್ನುವುದೂ ಸ್ಪಷ್ಟವಾಗಿಲ್ಲ. ವಕೀಲರು, ಸಾರ್ವಜನಿಕರಿಗೂ ನ್ಯಾಯಾಲಯ ಪ್ರವೇಶಕ್ಕೆ ಬೇರೆ ಬಾಗಿಲು ಮಾಡುತ್ತಾರೆಯೇ ಎಂದವರು ಪ್ರಶ್ನಿಸಿದ್ದಾರೆ.
Mangalore Lawyers go angry after the court main door reserved only for Judicial officers only and not for any advocates.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm