ಬ್ರೇಕಿಂಗ್ ನ್ಯೂಸ್
16-10-22 04:48 pm Mangalore Correspondent ಕರಾವಳಿ
ಮಂಗಳೂರು, ಅ.16 : ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ದ್ವಾರದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯ ಸಿಬಂದಿಗೆ ಮಾತ್ರ ಪ್ರವೇಶ ಎಂದು ಬೋರ್ಡ್ ಹಾಕಲಾಗಿದೆ. ಈ ಬಗ್ಗೆ ವಕೀಲರ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾಯಾಲಯ ಕಟ್ಟಡವು ಸಾರ್ವಜನಿಕರಿಗೆ ಮುಕ್ತ ಪ್ರವೇಶ ಹೊಂದಿರುವ ಕಟ್ಟಡವಾಗಿದ್ದರೂ ಜಿಲ್ಲಾ ನ್ಯಾಯಾಧೀಶರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರವನ್ನು ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಎನ್ನುವ ನಿರ್ಬಂಧ ಹಾಕಿರುವುದು ವಕೀಲ ಸಮುದಾಯದಲ್ಲಿ ಅಸಮಾಧಾನ ತರಿಸಿದೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯವಾದಿಗಳಿಗೂ ಪ್ರವೇಶ ನಿರ್ಬಂಧಿಸಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.
ಈ ಬಗ್ಗೆ ಶನಿವಾರ ಕಟ್ಟಡದ ಮುಂಭಾಗದ ಪ್ರಮುಖ ದ್ವಾರದಲ್ಲಿ ಈ ರೀತಿ ಬೋರ್ಡ್ ಹಾಕಿರುವುದು ತಿಳಿಯುತ್ತಿದ್ದಂತೆ ವಕೀಲರ ಸಂಘದ ಪ್ರತಿನಿಧಿಗಳು ಮುಖ್ಯ ನ್ಯಾಯಾಧೀಶರನ್ನು ಭೇಟಿಯಾಗಿದ್ದಾರೆ. ಭದ್ರತೆ ಸಲುವಾಗಿ ಈ ರೀತಿಯ ನಿರ್ಣಯ ಮಾಡಲಾಗಿದೆ. ಅದನ್ನು ನೀವು ಪ್ರಶ್ನೆ ಮಾಡುವಂತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆಂದು ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ತಿಳಿಸಿದ್ದಾರೆ.
ಈ ಬಗ್ಗೆ ಅ.18ರಂದು ವಕೀಲರ ಸಂಘದ ಎಲ್ಲ ಸದಸ್ಯರ ಸಭೆಯನ್ನು ಕರೆಯಲಾಗಿದ್ದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ವಕೀಲರು ನ್ಯಾಯಾಂಗದ ಭಾಗ ಆಗಿರುವಾಗ 30 ಮಂದಿ ನ್ಯಾಯಾಧೀಶರ ಸಲುವಾಗಿ ಮುಖ್ಯ ಪ್ರವೇಶವನ್ನೇ ನಿರ್ಬಂಧಿಸಿದ್ದು ಸರಿಯಲ್ಲ. ಈ ರೀತಿ ನಿರ್ಣಯ ಯಾಕೆ ಕೈಗೊಂಡಿದ್ದಾರೆ ಎನ್ನುವುದೂ ಸ್ಪಷ್ಟವಾಗಿಲ್ಲ. ವಕೀಲರು, ಸಾರ್ವಜನಿಕರಿಗೂ ನ್ಯಾಯಾಲಯ ಪ್ರವೇಶಕ್ಕೆ ಬೇರೆ ಬಾಗಿಲು ಮಾಡುತ್ತಾರೆಯೇ ಎಂದವರು ಪ್ರಶ್ನಿಸಿದ್ದಾರೆ.
Mangalore Lawyers go angry after the court main door reserved only for Judicial officers only and not for any advocates.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm