ಬ್ರೇಕಿಂಗ್ ನ್ಯೂಸ್
16-10-22 04:48 pm Mangalore Correspondent ಕರಾವಳಿ
ಮಂಗಳೂರು, ಅ.16 : ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ದ್ವಾರದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯ ಸಿಬಂದಿಗೆ ಮಾತ್ರ ಪ್ರವೇಶ ಎಂದು ಬೋರ್ಡ್ ಹಾಕಲಾಗಿದೆ. ಈ ಬಗ್ಗೆ ವಕೀಲರ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾಯಾಲಯ ಕಟ್ಟಡವು ಸಾರ್ವಜನಿಕರಿಗೆ ಮುಕ್ತ ಪ್ರವೇಶ ಹೊಂದಿರುವ ಕಟ್ಟಡವಾಗಿದ್ದರೂ ಜಿಲ್ಲಾ ನ್ಯಾಯಾಧೀಶರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರವನ್ನು ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಎನ್ನುವ ನಿರ್ಬಂಧ ಹಾಕಿರುವುದು ವಕೀಲ ಸಮುದಾಯದಲ್ಲಿ ಅಸಮಾಧಾನ ತರಿಸಿದೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯವಾದಿಗಳಿಗೂ ಪ್ರವೇಶ ನಿರ್ಬಂಧಿಸಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.
ಈ ಬಗ್ಗೆ ಶನಿವಾರ ಕಟ್ಟಡದ ಮುಂಭಾಗದ ಪ್ರಮುಖ ದ್ವಾರದಲ್ಲಿ ಈ ರೀತಿ ಬೋರ್ಡ್ ಹಾಕಿರುವುದು ತಿಳಿಯುತ್ತಿದ್ದಂತೆ ವಕೀಲರ ಸಂಘದ ಪ್ರತಿನಿಧಿಗಳು ಮುಖ್ಯ ನ್ಯಾಯಾಧೀಶರನ್ನು ಭೇಟಿಯಾಗಿದ್ದಾರೆ. ಭದ್ರತೆ ಸಲುವಾಗಿ ಈ ರೀತಿಯ ನಿರ್ಣಯ ಮಾಡಲಾಗಿದೆ. ಅದನ್ನು ನೀವು ಪ್ರಶ್ನೆ ಮಾಡುವಂತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆಂದು ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ತಿಳಿಸಿದ್ದಾರೆ.
ಈ ಬಗ್ಗೆ ಅ.18ರಂದು ವಕೀಲರ ಸಂಘದ ಎಲ್ಲ ಸದಸ್ಯರ ಸಭೆಯನ್ನು ಕರೆಯಲಾಗಿದ್ದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ವಕೀಲರು ನ್ಯಾಯಾಂಗದ ಭಾಗ ಆಗಿರುವಾಗ 30 ಮಂದಿ ನ್ಯಾಯಾಧೀಶರ ಸಲುವಾಗಿ ಮುಖ್ಯ ಪ್ರವೇಶವನ್ನೇ ನಿರ್ಬಂಧಿಸಿದ್ದು ಸರಿಯಲ್ಲ. ಈ ರೀತಿ ನಿರ್ಣಯ ಯಾಕೆ ಕೈಗೊಂಡಿದ್ದಾರೆ ಎನ್ನುವುದೂ ಸ್ಪಷ್ಟವಾಗಿಲ್ಲ. ವಕೀಲರು, ಸಾರ್ವಜನಿಕರಿಗೂ ನ್ಯಾಯಾಲಯ ಪ್ರವೇಶಕ್ಕೆ ಬೇರೆ ಬಾಗಿಲು ಮಾಡುತ್ತಾರೆಯೇ ಎಂದವರು ಪ್ರಶ್ನಿಸಿದ್ದಾರೆ.
Mangalore Lawyers go angry after the court main door reserved only for Judicial officers only and not for any advocates.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm