ಬ್ರೇಕಿಂಗ್ ನ್ಯೂಸ್
17-10-22 03:33 pm Mangalore Correspondent ಕರಾವಳಿ
ಮಂಗಳೂರು, ಅ.17 : ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ.
ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್ ಇವತ್ತು ಮನೆಯಲ್ಲಿ ಪೂಜೆ ಇದೆಯೆಂದು ಶಾಲೆಗೆ ರಜೆ ಹಾಕಿದ್ದ. ಬೆಳಗ್ಗೆ ಚಿಕ್ಕಪ್ಪ ಪಡು ಬೊಂಡಂತಿಲ ನಿವಾಸಿ ನಾರಾಯಣ ಎಂಬವರ ಜೊತೆಗೆ ಪೂಜೆಯ ಸಾಮಾನು ತರಲೆಂದು ಬೈಕಿನಲ್ಲಿ ಮಂಗಳೂರಿಗೆ ಬಂದಿದ್ದ.
ಇವರು ಸಾಮಾನು ಖರೀದಿಸಿ ಉರ್ವಾ- ಲೇಡಿಹಿಲ್ ಕಡೆಯಿಂದ ಲಾಲ್ ಬಾಗಿನತ್ತ ಬರುತ್ತಿದ್ದಾಗ, ಹಿಂದಿನಿಂದ ಯಮದೂತನಂತೆ ಧಾವಿಸಿ ಬಂದ ಖಾಸಗಿ ಬಸ್ ಪಬ್ಬಾಸ್ ಎದುರಿನ ಅಶ್ವತ್ಧ ಕಟ್ಟೆಯ ಬಳಿ ಬೈಕಿಗೆ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾದ ರಭಸಕ್ಕೆ ಹಿಂದೆ ಕುಳಿತಿದ್ದ ರಕ್ಷಣ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿಂದಲೇ ಬಸ್ ಹರಿದಿದೆ. ಬೈಕ್ ಸವಾರ ನಾರಾಯಣ ಎಡದ ಭಾಗಕ್ಕೆ ವಾಲಿ ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ರಕ್ಷಣ್ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾನೆ.
ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್, ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎಡ ಭಾಗದಿಂದ ಸಂಚರಿಸಿದ್ದರಿಂದ ಅಪಘಾತ ಆಗಿದೆ ಎನ್ನಲಾಗಿದೆ. ಸಂಚಾರಿ ವಿಭಾಗದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An accident between a bus and a two-wheeler claimed the life of a 12-year-old boy on Monday October 17 at Lalbagh in Mangalore. The deceased is identified as Dhanu from Neermarga.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm