ಬ್ರೇಕಿಂಗ್ ನ್ಯೂಸ್
17-10-22 03:33 pm Mangalore Correspondent ಕರಾವಳಿ
ಮಂಗಳೂರು, ಅ.17 : ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ.
ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್ ಇವತ್ತು ಮನೆಯಲ್ಲಿ ಪೂಜೆ ಇದೆಯೆಂದು ಶಾಲೆಗೆ ರಜೆ ಹಾಕಿದ್ದ. ಬೆಳಗ್ಗೆ ಚಿಕ್ಕಪ್ಪ ಪಡು ಬೊಂಡಂತಿಲ ನಿವಾಸಿ ನಾರಾಯಣ ಎಂಬವರ ಜೊತೆಗೆ ಪೂಜೆಯ ಸಾಮಾನು ತರಲೆಂದು ಬೈಕಿನಲ್ಲಿ ಮಂಗಳೂರಿಗೆ ಬಂದಿದ್ದ.

ಇವರು ಸಾಮಾನು ಖರೀದಿಸಿ ಉರ್ವಾ- ಲೇಡಿಹಿಲ್ ಕಡೆಯಿಂದ ಲಾಲ್ ಬಾಗಿನತ್ತ ಬರುತ್ತಿದ್ದಾಗ, ಹಿಂದಿನಿಂದ ಯಮದೂತನಂತೆ ಧಾವಿಸಿ ಬಂದ ಖಾಸಗಿ ಬಸ್ ಪಬ್ಬಾಸ್ ಎದುರಿನ ಅಶ್ವತ್ಧ ಕಟ್ಟೆಯ ಬಳಿ ಬೈಕಿಗೆ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾದ ರಭಸಕ್ಕೆ ಹಿಂದೆ ಕುಳಿತಿದ್ದ ರಕ್ಷಣ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿಂದಲೇ ಬಸ್ ಹರಿದಿದೆ. ಬೈಕ್ ಸವಾರ ನಾರಾಯಣ ಎಡದ ಭಾಗಕ್ಕೆ ವಾಲಿ ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ರಕ್ಷಣ್ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾನೆ.
ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್, ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎಡ ಭಾಗದಿಂದ ಸಂಚರಿಸಿದ್ದರಿಂದ ಅಪಘಾತ ಆಗಿದೆ ಎನ್ನಲಾಗಿದೆ. ಸಂಚಾರಿ ವಿಭಾಗದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An accident between a bus and a two-wheeler claimed the life of a 12-year-old boy on Monday October 17 at Lalbagh in Mangalore. The deceased is identified as Dhanu from Neermarga.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am