ಬ್ರೇಕಿಂಗ್ ನ್ಯೂಸ್
17-10-22 03:33 pm Mangalore Correspondent ಕರಾವಳಿ
ಮಂಗಳೂರು, ಅ.17 : ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ.
ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್ ಇವತ್ತು ಮನೆಯಲ್ಲಿ ಪೂಜೆ ಇದೆಯೆಂದು ಶಾಲೆಗೆ ರಜೆ ಹಾಕಿದ್ದ. ಬೆಳಗ್ಗೆ ಚಿಕ್ಕಪ್ಪ ಪಡು ಬೊಂಡಂತಿಲ ನಿವಾಸಿ ನಾರಾಯಣ ಎಂಬವರ ಜೊತೆಗೆ ಪೂಜೆಯ ಸಾಮಾನು ತರಲೆಂದು ಬೈಕಿನಲ್ಲಿ ಮಂಗಳೂರಿಗೆ ಬಂದಿದ್ದ.
ಇವರು ಸಾಮಾನು ಖರೀದಿಸಿ ಉರ್ವಾ- ಲೇಡಿಹಿಲ್ ಕಡೆಯಿಂದ ಲಾಲ್ ಬಾಗಿನತ್ತ ಬರುತ್ತಿದ್ದಾಗ, ಹಿಂದಿನಿಂದ ಯಮದೂತನಂತೆ ಧಾವಿಸಿ ಬಂದ ಖಾಸಗಿ ಬಸ್ ಪಬ್ಬಾಸ್ ಎದುರಿನ ಅಶ್ವತ್ಧ ಕಟ್ಟೆಯ ಬಳಿ ಬೈಕಿಗೆ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾದ ರಭಸಕ್ಕೆ ಹಿಂದೆ ಕುಳಿತಿದ್ದ ರಕ್ಷಣ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿಂದಲೇ ಬಸ್ ಹರಿದಿದೆ. ಬೈಕ್ ಸವಾರ ನಾರಾಯಣ ಎಡದ ಭಾಗಕ್ಕೆ ವಾಲಿ ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ರಕ್ಷಣ್ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾನೆ.
ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್, ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎಡ ಭಾಗದಿಂದ ಸಂಚರಿಸಿದ್ದರಿಂದ ಅಪಘಾತ ಆಗಿದೆ ಎನ್ನಲಾಗಿದೆ. ಸಂಚಾರಿ ವಿಭಾಗದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An accident between a bus and a two-wheeler claimed the life of a 12-year-old boy on Monday October 17 at Lalbagh in Mangalore. The deceased is identified as Dhanu from Neermarga.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm