ಬ್ರೇಕಿಂಗ್ ನ್ಯೂಸ್
17-10-22 10:57 pm Mangalore Correspondent ಕರಾವಳಿ
ಮಂಗಳೂರು, ಅ.17 : ಸುರತ್ಕಲ್ ಟೋಲ್ ಗೇಟ್ ವಿರುದ್ಧ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಟೋಲ್ ಗೇಟ್ ಸುತ್ತಮುತ್ತ ನೂರಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಟೋಲ್ ಗೇಟ್ ವಿರೋಧಿ ಸಮಿತಿಯ ಸವಾಲನ್ನು ಎದುರಿಸಲು ಜಿಲ್ಲಾಡಳಿತ ಪೊಲೀಸ್ ಸರ್ಪಗಾವಲನ್ನು ಹಾಕಿದೆ. ಸೋಮವಾರ ಸಂಜೆಯಿಂದಲೇ ಟೋಲ್ ಗೇಟ್ ಎರಡೂ ಬದಿಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಆಮೂಲಕ ವಿರೋಧಿ ಹೋರಾಟಕ್ಕಾಗಿ ಜನರು ಸೇರದಂತೆ ಬೆದರಿಸುವ ತಂತ್ರ ಹೆಣೆಯಲಾಗಿದೆ.

ಈಗಾಗಲೇ ನೇರ ಕಾರ್ಯಾಚರಣೆ ಹೆಸರಲ್ಲಿ ಜನರನ್ನು ಸೇರಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರಚಾರ ಅಭಿಯಾನ ನಡೆಸಿದೆ. ಇದರ ನಡುವೆ, ಪ್ರಮುಖರಿಗೆ ನೋಟೀಸ್ ಕೊಟ್ಟು ಬಾಂಡ್ ನೀಡುವ ಬಗ್ಗೆ ಎಚ್ಚರಿಕೆ ನೀಡಿದೆ. ಪೊಲೀಸರು ರಾತ್ರೋರಾತ್ರಿ ಮನೆಗೆ ನುಗ್ಗಿ ನೋಟಿಸ್ ಕೊಟ್ಟಿರುವ ವಿಚಾರ ವಿರೋಧಕ್ಕೆ ಕಾರಣ ಆಗಿರುವಾಗಲೇ ವಿವಿಧ ಪಕ್ಷಗಳ ನಾಯಕರು ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ. ಜೊತೆಗೆ ಬಿಜೆಪಿ ಸರಕಾರದ ನಿಲುವನ್ನೂ ಖಂಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಕೂಡ ಮುತ್ತಿಗೆ ಹೋರಾಟ ಬೆಂಬಲಿಸಿ ತಮ್ಮ ಕಾರ್ಯಕರ್ತರಿಗೆ ನೇರ ಕಾರ್ಯಾಚರಣೆಗೆ ಕರೆ ನೀಡಿದ್ದಾರೆ.

ಇದರಿಂದಾಗಿ ಜಿಲ್ಲಾಡಳಿತ ಪೊಲೀಸರನ್ನು ನಿಯೋಜಿಸಿ ಜನರು ಟೋಲ್ ಗೇಟ್ ಬಳಿ ಸೇರದಂತೆ ಮಾಡಲು ತಂತ್ರ ಹೆಣೆದಿದೆ. ಇದಕ್ಕಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್, ಟೋಲ್ ಗೇಟ್ ಪರವಾಗಿ ಸ್ಥಳದಲ್ಲಿ ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಈ ನಿಲುವನ್ನು ಖಂಡಿಸಿರುವ ಟೋಲ್ ಗೇಟ್ ಹೋರಾಟಗಾರರು, ಧನದಾಹಿ ನವಯುಗ್ ಕಂಪನಿಗೆ ಪೊಲೀಸರು ಸೆಕ್ಯುರಿಟಿ ಕೊಟ್ಟಿದ್ದಾರೆ. ಜನರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Protest over illegal toll, Hundreds of police deployed at Surathkal toll in Mangalore. The police have ordered the protesters to furnish a bond for Rs 2 lacs along with a government bail and also to report themselves at the Police Commissioner's office on Monday.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm