ಬ್ರೇಕಿಂಗ್ ನ್ಯೂಸ್
18-10-22 01:55 pm Mangalore Correspondent ಕರಾವಳಿ
ಮಂಗಳೂರು, ಅ.18: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ. ಈಗಾಗಲೇ ಪ್ರಕರಣದಲ್ಲಿ ರಿಯಾಜ್ ಎಂಬ ಯುವಕನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದರು. ತನಿಖೆಯ ಸಂದರ್ಭದಲ್ಲಿ ಕೇವಲ ಓವರ್ ಟೇಕ್ ಮಾಡುವ ವಿಚಾರದಲ್ಲಿ ಬೈಗುಳ ನೀಡಿದ್ದೇನೆ ಹೊರತು ವೈಯಕ್ತಿಕ ದ್ವೇಷ ಇಲ್ಲವೆಂದು ತಿಳಿದುಬಂದಿತ್ತು.
ಈ ಬಗ್ಗೆ ತನಿಖೆ ನಡೆಸಿದ್ದ ಎಸ್ಪಿ ಋಷಿಕೇಷ್ ಸೋನವಾಣೆ, ಪ್ರಕರಣದಲ್ಲಿ ಯಾವುದೇ ಶಸ್ತ್ರ ಬಳಕೆಯಾಗಿಲ್ಲ. ತಲವಾರು ಕಂಡುಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೆ, ಓವರ್ ಟೇಕ್ ವಿಚಾರದಲ್ಲಿ ಘಟನೆ ನಡೆದಿತ್ತು. ಆರೋಪಿ ರಿಯಾಜ್ ಯಾವುದೇ ಅಪರಾಧ ಹಿನ್ನೆಲೆ ಹೊಂದಿಲ್ಲ. ಶಾಸಕರು ಪ್ರಯಾಣಿಸುತ್ತಿದ್ದ ಖಾಸಗಿ ಕಾರು ಓವರ್ ಟೇಕ್ ಮಾಡಲು ಬಿಡಲಿಲ್ಲವೆಂದು ಹಿಂದಿನಿಂದ ತೆರಳುತ್ತಿದ್ದ ಸ್ಕಾರ್ಪಿಯೋ ಚಾಲಕ ರಿಯಾಜ್ ಫರಂಗಿಪೇಟೆಯಲ್ಲಿ ಶಾಸಕರಿದ್ದ ವಾಹನದ ಚಾಲಕನಿಗೆ ದಬಾಯಿಸಿದ್ದರು. ಶಾಸಕರಿಗೆ ಬೆದರಿಕೆ ಹಾಕುವ ವಿಚಾರ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಮರುದಿನ ಒತ್ತಡಕ್ಕೆ ಒಳಗಾಗಿಯೋ ಏನೋ, ಆರೋಪಿ ಕಾರಿನಲ್ಲಿ ಸ್ಪಾನರ್ ಪತ್ತೆಯಾಗಿತ್ತು. ಆತ ಬೆದರಿಕೆ ಹಾಕುವ ಸಂದರ್ಭದಲ್ಲಿ ತಲವಾರಿನಂತೆ ಸ್ಪಾನರ್ ತೋರಿಸಿದ್ದ ಅನ್ನುವುದನ್ನು ಎಸ್ಪಿ ಹೇಳಿದ್ದರು.
ಎಸ್ಪಿ ನೀಡಿದ್ದ ಸ್ಪಷ್ಟನೆಯಿಂದ ಶಾಸಕ ಹರೀಶ್ ಪೂಂಜಾ ತೀವ್ರ ಮುಜುಗರಕ್ಕೊಳಕ್ಕೆ ಒಳಗಾಗಿದ್ದರು. ಹರೀಶ್ ಪೂಂಜ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಗೆ ನೀಡಿದ್ದ ದೂರಿನಲ್ಲಿ ಆರೋಪಿ ತಲವಾರು ತೋರಿಸಿ ಬೆದರಿಕೆ ಹಾಕಿದ್ದ ಎಂದು ದೂರಲಾಗಿತ್ತು. ಈ ನಡುವೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಹರೀಶ್ ಪೂಂಜಾ, ಕಾರಿನಲ್ಲಿ ಒಬ್ಬನೇ ಇದ್ದ, ಆತನೇ ಕಾರು ಚಲಾಯಿಸಿಕೊಂಡಿದ್ದಲ್ಲದೆ ತಲವಾರು ಹಿಡಿದುಕೊಂಡಿದ್ದ ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ಟ್ರೋಲ್ ಆಗಿತ್ತು. ಇದೀಗ ರಾಜ್ಯ ಸರಕಾರ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಿಐಡಿ ಪೊಲೀಸರಿಗೆ ಒಪ್ಪಿಸಿದೆ. ಸಿಐಡಿ ತನಿಖೆಯಲ್ಲಿ ಸ್ಪಾನರ್ ಜೊತೆಗೆ ಹೊಸ ವಿಚಾರ ಏನು ಬೆಳಕಿಗೆ ಬರುತ್ತದೆ ಅನ್ನೋದು ನೋಡಬೇಕು.
Mangalore Life threat to MLA Harish Poonja, case handed over to CID for investigation.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm