ಬ್ರೇಕಿಂಗ್ ನ್ಯೂಸ್
18-10-22 01:55 pm Mangalore Correspondent ಕರಾವಳಿ
ಮಂಗಳೂರು, ಅ.18: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ. ಈಗಾಗಲೇ ಪ್ರಕರಣದಲ್ಲಿ ರಿಯಾಜ್ ಎಂಬ ಯುವಕನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದರು. ತನಿಖೆಯ ಸಂದರ್ಭದಲ್ಲಿ ಕೇವಲ ಓವರ್ ಟೇಕ್ ಮಾಡುವ ವಿಚಾರದಲ್ಲಿ ಬೈಗುಳ ನೀಡಿದ್ದೇನೆ ಹೊರತು ವೈಯಕ್ತಿಕ ದ್ವೇಷ ಇಲ್ಲವೆಂದು ತಿಳಿದುಬಂದಿತ್ತು.
ಈ ಬಗ್ಗೆ ತನಿಖೆ ನಡೆಸಿದ್ದ ಎಸ್ಪಿ ಋಷಿಕೇಷ್ ಸೋನವಾಣೆ, ಪ್ರಕರಣದಲ್ಲಿ ಯಾವುದೇ ಶಸ್ತ್ರ ಬಳಕೆಯಾಗಿಲ್ಲ. ತಲವಾರು ಕಂಡುಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೆ, ಓವರ್ ಟೇಕ್ ವಿಚಾರದಲ್ಲಿ ಘಟನೆ ನಡೆದಿತ್ತು. ಆರೋಪಿ ರಿಯಾಜ್ ಯಾವುದೇ ಅಪರಾಧ ಹಿನ್ನೆಲೆ ಹೊಂದಿಲ್ಲ. ಶಾಸಕರು ಪ್ರಯಾಣಿಸುತ್ತಿದ್ದ ಖಾಸಗಿ ಕಾರು ಓವರ್ ಟೇಕ್ ಮಾಡಲು ಬಿಡಲಿಲ್ಲವೆಂದು ಹಿಂದಿನಿಂದ ತೆರಳುತ್ತಿದ್ದ ಸ್ಕಾರ್ಪಿಯೋ ಚಾಲಕ ರಿಯಾಜ್ ಫರಂಗಿಪೇಟೆಯಲ್ಲಿ ಶಾಸಕರಿದ್ದ ವಾಹನದ ಚಾಲಕನಿಗೆ ದಬಾಯಿಸಿದ್ದರು. ಶಾಸಕರಿಗೆ ಬೆದರಿಕೆ ಹಾಕುವ ವಿಚಾರ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಮರುದಿನ ಒತ್ತಡಕ್ಕೆ ಒಳಗಾಗಿಯೋ ಏನೋ, ಆರೋಪಿ ಕಾರಿನಲ್ಲಿ ಸ್ಪಾನರ್ ಪತ್ತೆಯಾಗಿತ್ತು. ಆತ ಬೆದರಿಕೆ ಹಾಕುವ ಸಂದರ್ಭದಲ್ಲಿ ತಲವಾರಿನಂತೆ ಸ್ಪಾನರ್ ತೋರಿಸಿದ್ದ ಅನ್ನುವುದನ್ನು ಎಸ್ಪಿ ಹೇಳಿದ್ದರು.
ಎಸ್ಪಿ ನೀಡಿದ್ದ ಸ್ಪಷ್ಟನೆಯಿಂದ ಶಾಸಕ ಹರೀಶ್ ಪೂಂಜಾ ತೀವ್ರ ಮುಜುಗರಕ್ಕೊಳಕ್ಕೆ ಒಳಗಾಗಿದ್ದರು. ಹರೀಶ್ ಪೂಂಜ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಗೆ ನೀಡಿದ್ದ ದೂರಿನಲ್ಲಿ ಆರೋಪಿ ತಲವಾರು ತೋರಿಸಿ ಬೆದರಿಕೆ ಹಾಕಿದ್ದ ಎಂದು ದೂರಲಾಗಿತ್ತು. ಈ ನಡುವೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಹರೀಶ್ ಪೂಂಜಾ, ಕಾರಿನಲ್ಲಿ ಒಬ್ಬನೇ ಇದ್ದ, ಆತನೇ ಕಾರು ಚಲಾಯಿಸಿಕೊಂಡಿದ್ದಲ್ಲದೆ ತಲವಾರು ಹಿಡಿದುಕೊಂಡಿದ್ದ ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ಟ್ರೋಲ್ ಆಗಿತ್ತು. ಇದೀಗ ರಾಜ್ಯ ಸರಕಾರ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಿಐಡಿ ಪೊಲೀಸರಿಗೆ ಒಪ್ಪಿಸಿದೆ. ಸಿಐಡಿ ತನಿಖೆಯಲ್ಲಿ ಸ್ಪಾನರ್ ಜೊತೆಗೆ ಹೊಸ ವಿಚಾರ ಏನು ಬೆಳಕಿಗೆ ಬರುತ್ತದೆ ಅನ್ನೋದು ನೋಡಬೇಕು.
Mangalore Life threat to MLA Harish Poonja, case handed over to CID for investigation.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am