ಬ್ರೇಕಿಂಗ್ ನ್ಯೂಸ್
18-10-22 07:57 pm Mangalore Correspondent ಕರಾವಳಿ
ಮಂಗಳೂರು, ಅ.18 : ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ನಳಿನ್ ಕುಮಾರ್, ಟೋಲ್ ತೆರವು ಮಾಡಬೇಕು ಎನ್ನುವುದಕ್ಕೆ ನಮ್ಮ ತಕರಾರು ಇಲ್ಲ. ಟೋಲ್ಗೇಟ್ ಸ್ಥಾಪನೆ ವೇಳೆ ಮೊದಲು ವಿರೋಧಿಸಿದ್ದೇ ಬಿಜೆಪಿ ಎಂದು ಹೇಳಿದ್ದಾರೆ.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ನಳಿನ್, ತಾಂತ್ರಿಕ ಅಡಚಣೆಯ ಕಾರಣ ತೆರವು ಕಾರ್ಯ ವಿಳಂಬವಾಗಿದ್ದು, 20 ದಿನಗಳ ಕಾಲಾವಕಾಶ ಕೇಳಿದ್ದಾರೆ. ಹಾಗಿದ್ದರೂ ಕಾನೂನು ಕೈಗೆತ್ತಿಕೊಂಡು ಹೋರಾಟ ನಡೆಸುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ. ಸುರತ್ಕಲ್ ಟೋಲ್ಗೇಟ್ ತೆರವಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. 2013ರಲ್ಲಿ ಟೋಲ್ಗೇಟ್ ಆರಂಭವಾದಾಗ ನಾಗರಿಕ ಹಿತರಕ್ಷಣಾ ವೇದಿಕೆಯಡಿ ಮೊದಲು ವಿರೋಧ ವ್ಯಕ್ತಪಡಿಸಲಾಗಿತ್ತು. 2019ರಲ್ಲಿ ತಲಪಾಡಿ ಹಾಗೂ ಹೆಜಮಾಡಿಯಲ್ಲಿ ಟೋಲ್ಗೇಟ್ ಸ್ಥಾಪನೆಯಾಗಿತ್ತು. ಬಿಓಟಿ ಒಪ್ಪಂದ ಪ್ರಕಾರ ಹೆದ್ದಾರಿ ನಿರ್ಮಾಣ ಕೈಗೊಳ್ಳಲಾಗಿದೆ.

ಸುರತ್ಕಲ್ ಟೋಲ್ಗೇಟ್ ತೆರವು ವಿಚಾರದಲ್ಲಿ ಹಲವಾರು ಬಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲೂ ಟೋಲ್ಗೇಟ್ ತೆರವುಗೊಳಿಸುವ ಭರವಸೆ ನೀಡಿದ್ದಾರೆ. ಇದರ ನಡುವೆಯೂ ಹೋರಾಟಗಾರರು ಕಾರ್ಯಾಚರಣೆ ಇಳಿದಿರುವುದು ಸರಿಯಲ್ಲ. ಪ್ರಜಾಪ್ರಭುತ್ವ ರೀತಿಯಲ್ಲಿ ಹೋರಾಟ ನಡೆಸಲು ಯಾವುದೇ ತೊಂದರೆ ಇಲ್ಲ. ಅದು ಬಿಟ್ಟು ಕಾನೂನು ಕೈಗೆತ್ತಿಕೊಳ್ಳಲು ಮುಂದಾದರೆ ಕ್ರಮ ಅನಿವಾರ್ಯವಾಗುತ್ತದೆ ಎಂದು ಹೇಳಿದರು.

ಸುರತ್ಕಲ್ ಟೋಲ್ ಗೇಟ್ ವಿರುದ್ಧ ಮಂಗಳವಾರ ಭಾರೀ ಸಂಖ್ಯೆಯಲ್ಲಿ ಸೇರಿದ ಜನರು ಪ್ರತಿಭಟನೆ ನಡೆಸಿದ್ದು ಜಿಲ್ಲಾಡಳಿತ ಮತ್ತು ಶಾಸಕ, ಸಂಸದರಿಗೆ ಧಿಕ್ಕಾರ ಕೂಗಿದ್ದರು. ಭಾರೀ ಹೈಡ್ರಾಮಾದ ಬಳಿಕ ನೂರಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
BJP was the one that stated Surathkal toll was illegal, we don't have any issue says Nalin Kumar Kateel speaking to media persons here in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm