ಬ್ರೇಕಿಂಗ್ ನ್ಯೂಸ್
18-10-22 07:57 pm Mangalore Correspondent ಕರಾವಳಿ
ಮಂಗಳೂರು, ಅ.18 : ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ನಳಿನ್ ಕುಮಾರ್, ಟೋಲ್ ತೆರವು ಮಾಡಬೇಕು ಎನ್ನುವುದಕ್ಕೆ ನಮ್ಮ ತಕರಾರು ಇಲ್ಲ. ಟೋಲ್ಗೇಟ್ ಸ್ಥಾಪನೆ ವೇಳೆ ಮೊದಲು ವಿರೋಧಿಸಿದ್ದೇ ಬಿಜೆಪಿ ಎಂದು ಹೇಳಿದ್ದಾರೆ.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ನಳಿನ್, ತಾಂತ್ರಿಕ ಅಡಚಣೆಯ ಕಾರಣ ತೆರವು ಕಾರ್ಯ ವಿಳಂಬವಾಗಿದ್ದು, 20 ದಿನಗಳ ಕಾಲಾವಕಾಶ ಕೇಳಿದ್ದಾರೆ. ಹಾಗಿದ್ದರೂ ಕಾನೂನು ಕೈಗೆತ್ತಿಕೊಂಡು ಹೋರಾಟ ನಡೆಸುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ. ಸುರತ್ಕಲ್ ಟೋಲ್ಗೇಟ್ ತೆರವಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. 2013ರಲ್ಲಿ ಟೋಲ್ಗೇಟ್ ಆರಂಭವಾದಾಗ ನಾಗರಿಕ ಹಿತರಕ್ಷಣಾ ವೇದಿಕೆಯಡಿ ಮೊದಲು ವಿರೋಧ ವ್ಯಕ್ತಪಡಿಸಲಾಗಿತ್ತು. 2019ರಲ್ಲಿ ತಲಪಾಡಿ ಹಾಗೂ ಹೆಜಮಾಡಿಯಲ್ಲಿ ಟೋಲ್ಗೇಟ್ ಸ್ಥಾಪನೆಯಾಗಿತ್ತು. ಬಿಓಟಿ ಒಪ್ಪಂದ ಪ್ರಕಾರ ಹೆದ್ದಾರಿ ನಿರ್ಮಾಣ ಕೈಗೊಳ್ಳಲಾಗಿದೆ.
ಸುರತ್ಕಲ್ ಟೋಲ್ಗೇಟ್ ತೆರವು ವಿಚಾರದಲ್ಲಿ ಹಲವಾರು ಬಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲೂ ಟೋಲ್ಗೇಟ್ ತೆರವುಗೊಳಿಸುವ ಭರವಸೆ ನೀಡಿದ್ದಾರೆ. ಇದರ ನಡುವೆಯೂ ಹೋರಾಟಗಾರರು ಕಾರ್ಯಾಚರಣೆ ಇಳಿದಿರುವುದು ಸರಿಯಲ್ಲ. ಪ್ರಜಾಪ್ರಭುತ್ವ ರೀತಿಯಲ್ಲಿ ಹೋರಾಟ ನಡೆಸಲು ಯಾವುದೇ ತೊಂದರೆ ಇಲ್ಲ. ಅದು ಬಿಟ್ಟು ಕಾನೂನು ಕೈಗೆತ್ತಿಕೊಳ್ಳಲು ಮುಂದಾದರೆ ಕ್ರಮ ಅನಿವಾರ್ಯವಾಗುತ್ತದೆ ಎಂದು ಹೇಳಿದರು.
ಸುರತ್ಕಲ್ ಟೋಲ್ ಗೇಟ್ ವಿರುದ್ಧ ಮಂಗಳವಾರ ಭಾರೀ ಸಂಖ್ಯೆಯಲ್ಲಿ ಸೇರಿದ ಜನರು ಪ್ರತಿಭಟನೆ ನಡೆಸಿದ್ದು ಜಿಲ್ಲಾಡಳಿತ ಮತ್ತು ಶಾಸಕ, ಸಂಸದರಿಗೆ ಧಿಕ್ಕಾರ ಕೂಗಿದ್ದರು. ಭಾರೀ ಹೈಡ್ರಾಮಾದ ಬಳಿಕ ನೂರಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
BJP was the one that stated Surathkal toll was illegal, we don't have any issue says Nalin Kumar Kateel speaking to media persons here in Mangalore.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm