ಬ್ರೇಕಿಂಗ್ ನ್ಯೂಸ್
19-10-22 06:40 pm Mangalore Correspondent ಕರಾವಳಿ
ಮಂಗಳೂರು, ಅ.19: ಆಕೆಯ ಹೆಸರು ಭಾರ್ಗವಿ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ. ಎಂಟನೇ ಕ್ಲಾಸ್ ಓದ್ತಾ ಇದ್ದ ಭಾರ್ಗವಿ ಮೊನ್ನೆ ಅ.17ರಂದು ಸಂಜೆ ಮನೆಯಿಂದ ಟ್ಯೂಶನ್ ಕ್ಲಾಸಿಗೆಂದು ಹೋಗಿದ್ದವಳು ನಾಪತ್ತೆಯಾಗಿದ್ದಾಳೆ. ಈ ನಡುವೆ, ಆಕೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಶಾಲೆಯಲ್ಲಿ ಮಾರ್ಕು ಕಡಿಮೆ ಬಂದಿದೆಯೆಂದು ಮನೆ ಬಿಟ್ಟು ಹೋಗಿದ್ದಾಳೆ ಎನ್ನಲಾಗುತ್ತಿದೆ. ಹೆತ್ತವರು ಗಾಬರಿಗೊಂಡಿದ್ದು, ಮಗಳನ್ನು ಹುಡುಕಿ ಕೊಡುವಂತೆ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ನಂದಿನಿ ಲೇಔಟ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ನೀಡಿದ್ದಾರೆ. ಸೋಮವಾರ ಸಂಜೆ 4.30ಕ್ಕೆ ತೆರಳಿದ್ದ ಆಕೆ, ಮನೆಯಿಂದ 5 ಸಾವಿರ ರೂಪಾಯಿ ಇಸ್ಕೊಂಡು ಹೋಗಿದ್ದಾಳೆ ಎನ್ನುವುದು ಪೊಲೀಸರಿಗೆ ಮಾಹಿತಿ ಲಭಿಸಿದೆ.



ಮರುದಿನ ಅ.18ರಂದು ನಸುಕಿನ ಮೂರು ಗಂಟೆ ವೇಳೆಗೆ ಭಾರ್ಗವಿ ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತ್ಯಕ್ಷ ಆಗಿದ್ದಳು. ಬೆಂಗಳೂರು ಬಸ್ಸಿನಲ್ಲಿ ಬಂದಿದ್ದ ಹುಡುಗಿ ಅಲ್ಲಿಂದ ಸರಿರಾತ್ರಿಯಲ್ಲೇ ಮುಕ್ಕ ಬೀಚ್ ನತ್ತ ಆಟೋದಲ್ಲಿ ತೆರಳಿದ್ದಾಳೆ. ಈಕೆ ಬಸ್ ನಿಲ್ದಾಣಕ್ಕೆ ಬಂದಿರುವುದು ಮತ್ತು ಆಟೋದಲ್ಲಿ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಆನಂತರ, ಆರು ಗಂಟೆ ವೇಳೆಗೆ ಬೀಚ್ ನಿಂದ ಮರಳಿ ಅದೇ ಬಸ್ ನಿಲ್ದಾಣಕ್ಕೆ ಬಂದಿದ್ದ ಹುಡುಗಿ ಆನಂತರ ಎಲ್ಲಿ ಹೋಗಿದ್ದಾಳೆ ಅನ್ನುವುದು ಗೊತ್ತಾಗಿಲ್ಲ. ಕೆಲವರು ಆಕೆ ಮೈಸೂರು ಬಸ್ ಹತ್ತಿದ್ದಾಳೆ, ಬೆಂಗಳೂರಿಗೆ ರಿಟರ್ನ್ ಹೋಗಿದ್ದಾಳೆ ಅಂತ ಹೇಳುತ್ತಿದ್ದಾರೆ. ಈ ಬಗ್ಗೆ ಮಂಗಳೂರಿನ ಪೊಲೀಸರು ಕೂಡ ಹುಡುಕಾಟ ನಡೆಸಿದ್ದಾರೆ.



ಹುಡುಗಿ ನಾಪತ್ತೆ ಬಗ್ಗೆ ನಂದಿನಿ ಲೇಔಟ್ ಠಾಣೆಯಲ್ಲಿ ಸಂಪರ್ಕಿಸಿದಾಗ, ಇನ್ನೂ ಹುಡುಗಿ ಸಿಕ್ಕಿಲ್ಲ. ಹುಡುಕುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಮಂಗಳೂರಿಗೆ ಬಂದಾಕೆ, ಬೆಂಗಳೂರಿಗೆ ಮರಳಿ ಬರ್ತಿದ್ದೀನಿ ಅಂತ ತನ್ನ ಸ್ನೇಹಿತೆಗೆ ಕರೆ ಮಾಡಿ ತಿಳಿಸಿದ್ದಾಳೆ ಎನ್ನಲಾಗುತ್ತಿದೆ. ಈ ಕರೆಯ ಜಾಡು ಹಿಡಿದು ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 14 ವರ್ಷದ ಹುಡುಗಿ ಒಬ್ಬಂಟಿಯಾಗಿಯೇ ಮಂಗಳೂರು- ಬೆಂಗಳೂರು ಸುತ್ತಾಡಿದ್ದು ಹೆತ್ತವರನ್ನು ಗಾಬರಿಪಡಿಸಿದೆ.
Missing girl from bangalore found in mangalore, gets down at KSRTC bus stand and goes to Mukka beach by Auto. Bhargavi was missing from Bangalore after her toution.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm