ಬ್ರೇಕಿಂಗ್ ನ್ಯೂಸ್
19-10-22 06:40 pm Mangalore Correspondent ಕರಾವಳಿ
ಮಂಗಳೂರು, ಅ.19: ಆಕೆಯ ಹೆಸರು ಭಾರ್ಗವಿ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ. ಎಂಟನೇ ಕ್ಲಾಸ್ ಓದ್ತಾ ಇದ್ದ ಭಾರ್ಗವಿ ಮೊನ್ನೆ ಅ.17ರಂದು ಸಂಜೆ ಮನೆಯಿಂದ ಟ್ಯೂಶನ್ ಕ್ಲಾಸಿಗೆಂದು ಹೋಗಿದ್ದವಳು ನಾಪತ್ತೆಯಾಗಿದ್ದಾಳೆ. ಈ ನಡುವೆ, ಆಕೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಶಾಲೆಯಲ್ಲಿ ಮಾರ್ಕು ಕಡಿಮೆ ಬಂದಿದೆಯೆಂದು ಮನೆ ಬಿಟ್ಟು ಹೋಗಿದ್ದಾಳೆ ಎನ್ನಲಾಗುತ್ತಿದೆ. ಹೆತ್ತವರು ಗಾಬರಿಗೊಂಡಿದ್ದು, ಮಗಳನ್ನು ಹುಡುಕಿ ಕೊಡುವಂತೆ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ನಂದಿನಿ ಲೇಔಟ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ನೀಡಿದ್ದಾರೆ. ಸೋಮವಾರ ಸಂಜೆ 4.30ಕ್ಕೆ ತೆರಳಿದ್ದ ಆಕೆ, ಮನೆಯಿಂದ 5 ಸಾವಿರ ರೂಪಾಯಿ ಇಸ್ಕೊಂಡು ಹೋಗಿದ್ದಾಳೆ ಎನ್ನುವುದು ಪೊಲೀಸರಿಗೆ ಮಾಹಿತಿ ಲಭಿಸಿದೆ.
ಮರುದಿನ ಅ.18ರಂದು ನಸುಕಿನ ಮೂರು ಗಂಟೆ ವೇಳೆಗೆ ಭಾರ್ಗವಿ ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತ್ಯಕ್ಷ ಆಗಿದ್ದಳು. ಬೆಂಗಳೂರು ಬಸ್ಸಿನಲ್ಲಿ ಬಂದಿದ್ದ ಹುಡುಗಿ ಅಲ್ಲಿಂದ ಸರಿರಾತ್ರಿಯಲ್ಲೇ ಮುಕ್ಕ ಬೀಚ್ ನತ್ತ ಆಟೋದಲ್ಲಿ ತೆರಳಿದ್ದಾಳೆ. ಈಕೆ ಬಸ್ ನಿಲ್ದಾಣಕ್ಕೆ ಬಂದಿರುವುದು ಮತ್ತು ಆಟೋದಲ್ಲಿ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಆನಂತರ, ಆರು ಗಂಟೆ ವೇಳೆಗೆ ಬೀಚ್ ನಿಂದ ಮರಳಿ ಅದೇ ಬಸ್ ನಿಲ್ದಾಣಕ್ಕೆ ಬಂದಿದ್ದ ಹುಡುಗಿ ಆನಂತರ ಎಲ್ಲಿ ಹೋಗಿದ್ದಾಳೆ ಅನ್ನುವುದು ಗೊತ್ತಾಗಿಲ್ಲ. ಕೆಲವರು ಆಕೆ ಮೈಸೂರು ಬಸ್ ಹತ್ತಿದ್ದಾಳೆ, ಬೆಂಗಳೂರಿಗೆ ರಿಟರ್ನ್ ಹೋಗಿದ್ದಾಳೆ ಅಂತ ಹೇಳುತ್ತಿದ್ದಾರೆ. ಈ ಬಗ್ಗೆ ಮಂಗಳೂರಿನ ಪೊಲೀಸರು ಕೂಡ ಹುಡುಕಾಟ ನಡೆಸಿದ್ದಾರೆ.
ಹುಡುಗಿ ನಾಪತ್ತೆ ಬಗ್ಗೆ ನಂದಿನಿ ಲೇಔಟ್ ಠಾಣೆಯಲ್ಲಿ ಸಂಪರ್ಕಿಸಿದಾಗ, ಇನ್ನೂ ಹುಡುಗಿ ಸಿಕ್ಕಿಲ್ಲ. ಹುಡುಕುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಮಂಗಳೂರಿಗೆ ಬಂದಾಕೆ, ಬೆಂಗಳೂರಿಗೆ ಮರಳಿ ಬರ್ತಿದ್ದೀನಿ ಅಂತ ತನ್ನ ಸ್ನೇಹಿತೆಗೆ ಕರೆ ಮಾಡಿ ತಿಳಿಸಿದ್ದಾಳೆ ಎನ್ನಲಾಗುತ್ತಿದೆ. ಈ ಕರೆಯ ಜಾಡು ಹಿಡಿದು ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 14 ವರ್ಷದ ಹುಡುಗಿ ಒಬ್ಬಂಟಿಯಾಗಿಯೇ ಮಂಗಳೂರು- ಬೆಂಗಳೂರು ಸುತ್ತಾಡಿದ್ದು ಹೆತ್ತವರನ್ನು ಗಾಬರಿಪಡಿಸಿದೆ.
Missing girl from bangalore found in mangalore, gets down at KSRTC bus stand and goes to Mukka beach by Auto. Bhargavi was missing from Bangalore after her toution.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm