ಬ್ರೇಕಿಂಗ್ ನ್ಯೂಸ್
19-10-22 10:51 pm Udupi Correspondent ಕರಾವಳಿ
ಉಡುಪಿ, ಅ.19: ಜಗತ್ತಿನ ಅತ್ಯಂತ ದೊಡ್ಡ ಪ್ಯಾಸೆಂಜರ್ ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ದುಬೈ ಮೂಲದ ಎಮಿರೇಟ್ಸ್ ಕಂಪನಿಯ ಏರ್ ಬಸ್ 380 ವಿಮಾನವನ್ನು ಉಡುಪಿ ಮೂಲದ ಪೈಲಟ್ ಸಂದೀಪ್ ಪ್ರಭು ಚಲಾಯಿಸಿಕೊಂಡು ಬಂದು ಸುರಕ್ಷಿತವಾಗಿ ಬೆಂಗಳೂರಿನ ನಿಲ್ದಾಣದಲ್ಲಿ ಇಳಿಸಿದ್ದಾರೆ.
15 ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿರುವ ಸಂದೀಪ್ ಪ್ರಭು, ಅಲೆವೂರಿನ ಆರತಿ ಪ್ರಭು ಮತ್ತು ಶಿವರಾಯ ಪ್ರಭು ದಂಪತಿ ಎರಡನೇ ಪುತ್ರ. ಮೊದಲಿಗೆ ಫಿಲಿಪೈನ್ಸ್ ನಲ್ಲಿ ಪೈಲಟ್ ತರಬೇತಿ ಪಡೆದುಕೊಂಡಿದ್ದ ಬಳಿಕ ಫ್ರಾನ್ಸ್ ನಲ್ಲಿ ಉನ್ನತ ಮಟ್ಟದ ತರಬೇತಿ ಪಡೆದಿದ್ದರು. ಆನಂತರ, ದುಬೈ ಮೂಲದ ಎಮಿರೇಟ್ಸ್ ಕಂಪನಿಯಲ್ಲಿ ಪೈಲಟ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು.

ಇದಕ್ಕೂ ಹಿಂದೆ ಇದೇ ವಿಮಾನವನ್ನು ಮುಂಬೈನಲ್ಲಿಯೂ ಸಂದೀಪ್ ಪ್ರಭು ಮೊದಲ ಬಾರಿಗೆ ಇಳಿಸಿದ್ದರು. ಬೆಂಗಳೂರಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿಸಿದ ಬಳಿಕ ಕನ್ನಡ ಭಾಷೆಯಲ್ಲಿ ಅನೌನ್ಸ್ ಮಾಡುತ್ತಿದ್ದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಅಚ್ಚರಿಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ಎರಡನೇ ಟರ್ಮಿನಲ್ ರೆಡಿಯಾಗಿದ್ದು, ಇದೀಗ ಜಗತ್ತಿನ 30 ರಾಷ್ಟ್ರಗಳಿಂದ ವಿಮಾನ ಸಂಚಾರಕ್ಕೆ ತೆರೆದುಕೊಂಡಿದೆ.
ಅ.30ರಿಂದ ಎಮಿರೇಟ್ಸ್ ಕಂಪನಿಯ ಎ380 ಏರ್ ಬಸ್ ವಿಮಾನವು ಬೆಂಗಳೂರು – ದುಬೈ ಮಧ್ಯೆ ದಿನವೂ ಸಂಚಾರ ನಡೆಸಲಿದೆ. ಪೈಲಟ್ ಸಂದೀಪ್ ಪ್ರಭು ದುಬೈನಲ್ಲಿಯೇ ವಾಸ್ತವ್ಯವಿದ್ದು, ಅವರಿಗೆ ಬೆಂಗಳೂರು ಎರಡನೇ ಮನೆಯಿದ್ದಂತೆ. ನೇರ ವಿಮಾನ ಸಂಚಾರ ಇರುವುದರಿಂದ ಬೆಂಗಳೂರಿಗೆ ಬೇರೆ ಬೇರೆ ವಿಮಾನಗಳನ್ನು ಚಲಾಯಿಸಿಕೊಂಡು ಬರುತ್ತಾರೆ.
World's largest passenger flight Airbus A380 owned by Emirates made its historic landing at the new terminal of Bengaluru's Kempegowda International Airport on Friday, October 14. The successful test flight was flown by pilot Sandeep Prabhu of Udupi.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm