ಬ್ರೇಕಿಂಗ್ ನ್ಯೂಸ್
19-10-22 10:51 pm Udupi Correspondent ಕರಾವಳಿ
ಉಡುಪಿ, ಅ.19: ಜಗತ್ತಿನ ಅತ್ಯಂತ ದೊಡ್ಡ ಪ್ಯಾಸೆಂಜರ್ ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ದುಬೈ ಮೂಲದ ಎಮಿರೇಟ್ಸ್ ಕಂಪನಿಯ ಏರ್ ಬಸ್ 380 ವಿಮಾನವನ್ನು ಉಡುಪಿ ಮೂಲದ ಪೈಲಟ್ ಸಂದೀಪ್ ಪ್ರಭು ಚಲಾಯಿಸಿಕೊಂಡು ಬಂದು ಸುರಕ್ಷಿತವಾಗಿ ಬೆಂಗಳೂರಿನ ನಿಲ್ದಾಣದಲ್ಲಿ ಇಳಿಸಿದ್ದಾರೆ.
15 ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿರುವ ಸಂದೀಪ್ ಪ್ರಭು, ಅಲೆವೂರಿನ ಆರತಿ ಪ್ರಭು ಮತ್ತು ಶಿವರಾಯ ಪ್ರಭು ದಂಪತಿ ಎರಡನೇ ಪುತ್ರ. ಮೊದಲಿಗೆ ಫಿಲಿಪೈನ್ಸ್ ನಲ್ಲಿ ಪೈಲಟ್ ತರಬೇತಿ ಪಡೆದುಕೊಂಡಿದ್ದ ಬಳಿಕ ಫ್ರಾನ್ಸ್ ನಲ್ಲಿ ಉನ್ನತ ಮಟ್ಟದ ತರಬೇತಿ ಪಡೆದಿದ್ದರು. ಆನಂತರ, ದುಬೈ ಮೂಲದ ಎಮಿರೇಟ್ಸ್ ಕಂಪನಿಯಲ್ಲಿ ಪೈಲಟ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು.

ಇದಕ್ಕೂ ಹಿಂದೆ ಇದೇ ವಿಮಾನವನ್ನು ಮುಂಬೈನಲ್ಲಿಯೂ ಸಂದೀಪ್ ಪ್ರಭು ಮೊದಲ ಬಾರಿಗೆ ಇಳಿಸಿದ್ದರು. ಬೆಂಗಳೂರಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿಸಿದ ಬಳಿಕ ಕನ್ನಡ ಭಾಷೆಯಲ್ಲಿ ಅನೌನ್ಸ್ ಮಾಡುತ್ತಿದ್ದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಅಚ್ಚರಿಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ಎರಡನೇ ಟರ್ಮಿನಲ್ ರೆಡಿಯಾಗಿದ್ದು, ಇದೀಗ ಜಗತ್ತಿನ 30 ರಾಷ್ಟ್ರಗಳಿಂದ ವಿಮಾನ ಸಂಚಾರಕ್ಕೆ ತೆರೆದುಕೊಂಡಿದೆ.
ಅ.30ರಿಂದ ಎಮಿರೇಟ್ಸ್ ಕಂಪನಿಯ ಎ380 ಏರ್ ಬಸ್ ವಿಮಾನವು ಬೆಂಗಳೂರು – ದುಬೈ ಮಧ್ಯೆ ದಿನವೂ ಸಂಚಾರ ನಡೆಸಲಿದೆ. ಪೈಲಟ್ ಸಂದೀಪ್ ಪ್ರಭು ದುಬೈನಲ್ಲಿಯೇ ವಾಸ್ತವ್ಯವಿದ್ದು, ಅವರಿಗೆ ಬೆಂಗಳೂರು ಎರಡನೇ ಮನೆಯಿದ್ದಂತೆ. ನೇರ ವಿಮಾನ ಸಂಚಾರ ಇರುವುದರಿಂದ ಬೆಂಗಳೂರಿಗೆ ಬೇರೆ ಬೇರೆ ವಿಮಾನಗಳನ್ನು ಚಲಾಯಿಸಿಕೊಂಡು ಬರುತ್ತಾರೆ.
World's largest passenger flight Airbus A380 owned by Emirates made its historic landing at the new terminal of Bengaluru's Kempegowda International Airport on Friday, October 14. The successful test flight was flown by pilot Sandeep Prabhu of Udupi.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm