ಬ್ರೇಕಿಂಗ್ ನ್ಯೂಸ್
19-10-22 10:51 pm Udupi Correspondent ಕರಾವಳಿ
ಉಡುಪಿ, ಅ.19: ಜಗತ್ತಿನ ಅತ್ಯಂತ ದೊಡ್ಡ ಪ್ಯಾಸೆಂಜರ್ ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ದುಬೈ ಮೂಲದ ಎಮಿರೇಟ್ಸ್ ಕಂಪನಿಯ ಏರ್ ಬಸ್ 380 ವಿಮಾನವನ್ನು ಉಡುಪಿ ಮೂಲದ ಪೈಲಟ್ ಸಂದೀಪ್ ಪ್ರಭು ಚಲಾಯಿಸಿಕೊಂಡು ಬಂದು ಸುರಕ್ಷಿತವಾಗಿ ಬೆಂಗಳೂರಿನ ನಿಲ್ದಾಣದಲ್ಲಿ ಇಳಿಸಿದ್ದಾರೆ.
15 ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿರುವ ಸಂದೀಪ್ ಪ್ರಭು, ಅಲೆವೂರಿನ ಆರತಿ ಪ್ರಭು ಮತ್ತು ಶಿವರಾಯ ಪ್ರಭು ದಂಪತಿ ಎರಡನೇ ಪುತ್ರ. ಮೊದಲಿಗೆ ಫಿಲಿಪೈನ್ಸ್ ನಲ್ಲಿ ಪೈಲಟ್ ತರಬೇತಿ ಪಡೆದುಕೊಂಡಿದ್ದ ಬಳಿಕ ಫ್ರಾನ್ಸ್ ನಲ್ಲಿ ಉನ್ನತ ಮಟ್ಟದ ತರಬೇತಿ ಪಡೆದಿದ್ದರು. ಆನಂತರ, ದುಬೈ ಮೂಲದ ಎಮಿರೇಟ್ಸ್ ಕಂಪನಿಯಲ್ಲಿ ಪೈಲಟ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು.

ಇದಕ್ಕೂ ಹಿಂದೆ ಇದೇ ವಿಮಾನವನ್ನು ಮುಂಬೈನಲ್ಲಿಯೂ ಸಂದೀಪ್ ಪ್ರಭು ಮೊದಲ ಬಾರಿಗೆ ಇಳಿಸಿದ್ದರು. ಬೆಂಗಳೂರಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿಸಿದ ಬಳಿಕ ಕನ್ನಡ ಭಾಷೆಯಲ್ಲಿ ಅನೌನ್ಸ್ ಮಾಡುತ್ತಿದ್ದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಅಚ್ಚರಿಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ಎರಡನೇ ಟರ್ಮಿನಲ್ ರೆಡಿಯಾಗಿದ್ದು, ಇದೀಗ ಜಗತ್ತಿನ 30 ರಾಷ್ಟ್ರಗಳಿಂದ ವಿಮಾನ ಸಂಚಾರಕ್ಕೆ ತೆರೆದುಕೊಂಡಿದೆ.
ಅ.30ರಿಂದ ಎಮಿರೇಟ್ಸ್ ಕಂಪನಿಯ ಎ380 ಏರ್ ಬಸ್ ವಿಮಾನವು ಬೆಂಗಳೂರು – ದುಬೈ ಮಧ್ಯೆ ದಿನವೂ ಸಂಚಾರ ನಡೆಸಲಿದೆ. ಪೈಲಟ್ ಸಂದೀಪ್ ಪ್ರಭು ದುಬೈನಲ್ಲಿಯೇ ವಾಸ್ತವ್ಯವಿದ್ದು, ಅವರಿಗೆ ಬೆಂಗಳೂರು ಎರಡನೇ ಮನೆಯಿದ್ದಂತೆ. ನೇರ ವಿಮಾನ ಸಂಚಾರ ಇರುವುದರಿಂದ ಬೆಂಗಳೂರಿಗೆ ಬೇರೆ ಬೇರೆ ವಿಮಾನಗಳನ್ನು ಚಲಾಯಿಸಿಕೊಂಡು ಬರುತ್ತಾರೆ.
World's largest passenger flight Airbus A380 owned by Emirates made its historic landing at the new terminal of Bengaluru's Kempegowda International Airport on Friday, October 14. The successful test flight was flown by pilot Sandeep Prabhu of Udupi.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm