ಬ್ರೇಕಿಂಗ್ ನ್ಯೂಸ್
20-10-22 10:02 pm Mangalore Correspondent ಕರಾವಳಿ
ಮಂಗಳೂರು, ಅ.20 : ಸುರತ್ಕಲ್ ಟೋಲ್ಗೇಟ್ ವಿರುದ್ಧ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಹೋರಾಟ ಸಮಿತಿಯ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ. ಟೋಲ್ಗೇಟ್ ವ್ಯವಸ್ಥಾಪಕ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೀಡಿದ ಪ್ರತ್ಯೇಕ ದೂರನ್ನು ಆಧರಿಸಿ, ಸುರತ್ಕಲ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ.
ಅ.18ರಂದು ಹೋರಾಟ ಸಮಿತಿಯ 25- 30ಕ್ಕು ಹೆಚ್ಚು ಸದಸ್ಯರು ಅಕ್ರಮ ಕೂಟ ಸೇರಿ ಸುರತ್ಕಲ್ ಟೋಲ್ ಪ್ಲಾಜಾ ಎದುರು ರಸ್ತೆಯಲ್ಲಿ ಕುಳಿತು ಘೋಷಣೆ ಕೂಗುತ್ತ, ವಾಹನ ಸಂಚಾರ ತಡೆದು ನಿಲ್ಲಿಸಿದ್ದಾರೆ. ಸುಗಮ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯವರು ಎಸಿಪಿ ಕಚೇರಿಯಲ್ಲಿ ಅ.14ರಂದು ನಡೆದ ಸಭೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರೂ, ಅ.18ರಂದು ನಡೆಸಿದ ಪ್ರತಿಭಟನೆಯ ವೇಳೆ ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ' ಎಂದು ದೂರಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಹಾಗೂ ಸುರತ್ಕಲ್ ಎನ್ಐಟಿಕೆ ಟೋಲ್ನ ಶುಲ್ಕ ವಸೂಲಿ ಏಜೆನ್ಸಿ ನೂರ್ ಮೊಹಮ್ಮದ್ ಸಂಸ್ಥೆಯ ಸುರತ್ಕಲ್ ವಿಭಾಗದ ವ್ಯವಸ್ಥಾಪಕ ಶಿಶುಪಾಲ್ ಸಿಂಗ್ ಅವರು ಅ.18ರಂದೇ ದೂರು ನೀಡಿದ್ದು, ಪೊಲೀಸರು ಅದೇ ದಿನ ಎಫ್ಐಆರ್ ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 147, 341, 283, 149 (ಅಕ್ರಮ ಕೂಟ ಸೇರಿ, ಸಾರ್ವಜನಿಕರ ಸುರಕ್ಷತೆಗೆ ಅಡ್ಡಿಪಡಿಸಿದ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿಲ್ಲ.
Mangalore Trouble of traffic moments during protest of surathkal toll, separate FIR has been registered with activists who were involved during the protest.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm