ಬ್ರೇಕಿಂಗ್ ನ್ಯೂಸ್
11-10-20 01:59 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಮುಡಿಪು ಮಣ್ಣು ಮಾರಾಟ ದಂಧೆಯ ಬಗ್ಗೆ ‘ಹೆಡ್ ಲೈನ್ ಕರ್ನಾಟಕ’ ಮಾಡಿದ ವಿಸ್ತೃತ ವರದಿಯಿಂದ ಅಧಿಕಾರಿಗಳು ಎಚ್ಚತ್ತುಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಗಣಿಗಾರಿಕೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವುದಕ್ಕಾಗಿ ಏಳು ಮಂದಿ ಅಧಿಕಾರಿಗಳನ್ನು ನಿಯೋಜಿಸಿದ್ದಾಗಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸೂಚನೆಯಂತೆ ಮಂಗಳೂರಿನ ಸಹಾಯಕ ಕಮಿಷನರ್ ಮದನ್ ಮೋಹನ್, ಪೊಲೀಸರ ಜೊತೆಗೆ ಅಕ್ರಮ ದಂಧೆ ನಡೆಯುವ ಮುಡಿಪು ಪ್ರದೇಶಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಗಣಿಗಾರಿಕೆ ಸ್ಥಳದಲ್ಲಿದ್ದ 30ಕ್ಕೂ ಹೆಚ್ಚು ಟಿಪ್ಪರ್ ಮತ್ತು ಕಂಟೇನರ್ ಲಾರಿ, 5 ಜೆಸಿಬಿ ಹಾಗೂ ಮೂರು ಹಿಟಾಚಿ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ.



ಮಣ್ಣು ಮಾರಾಟ ದಂಧೆಯ ಬಗ್ಗೆ ಗಮನಕ್ಕೆ ಬಂದಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲು ಏಳು ಮಂದಿ ಅಧಿಕಾರಿಗಳನ್ನು ನಿಯೋಜಿಸಿದ್ದೇನೆ. ಪರಿಸರಕ್ಕೆ ಹಾನಿಯಾಗುವ ವಿಚಾರದಲ್ಲಿ ದೂರುಗಳು ಬಂದಿದ್ದವು. ಸ್ಥಳದಲ್ಲಿ ಗಣಿಗಾರಿಕೆ ನಡೆಸಲು ಲೈಸನ್ಸ್ ಇದೆಯೇ ಅಥವಾ ಮಣ್ಣು ಮಾರಾಟಕ್ಕೆ ಲೈಸನ್ಸ್ ಇದೆಯೇ ಅನ್ನುವ ವಿಚಾರದಲ್ಲಿ ಒಂದು ವಾರದೊಳಗೆ ರಿಪೋರ್ಟ್ ನೀಡಲು ಆದೇಶ ಮಾಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಂಗಳೂರು ಹೊರವಲಯದ ಮುಡಿಪು, ಪಜೀರು, ಕೈರಂಗಳ, ಬಾಳೆಪುಣಿ, ಕೋಣಾಜೆ ಗ್ರಾಮಗಳಲ್ಲಿ ದೊಡ್ಡ ಮಟ್ಟದ ಅಕ್ರಮ ಬಾಕ್ಸೈಟ್ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ವರದಿ ಮಾಡಲಾಗಿತ್ತು. ಮಣ್ಣನ್ನು ಕಂಟೇನರ್ ಲಾರಿಗಳಲ್ಲಿ ತುಂಬಿಸಿ ತಮಿಳ್ನಾಡು ಮತ್ತು ಆಂಧ್ರ ಪ್ರದೇಶ ರಾಜ್ಯಗಳಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದೆ. ದಂಧೆಯಲ್ಲಿ ಪ್ರಭಾವಿ ಶಾಸಕರು ಮತ್ತು ರಾಜಕಾರಣಿಗಳು ಭಾಗಿಯಾಗಿದ್ದು, ಕಳೆದ ಐದಾರು ವರ್ಷಗಳಿಂದ ದಂಧೆ ನಡೆಯುತ್ತಿದೆ.
ಇದನ್ನೂ ಓದಿ: ಮುಡಿಪು ಗುಡ್ಡಕ್ಕೇ ಕನ್ನ ; ಮಣ್ಣಿನ ದಂಧೆ ಬಲುಜೋರು, ಪ್ರಭಾವಿಗಳ ಕಾರುಬಾರು !
Mangaluru DC Rajendra orders to draft seven member committee in probing illegal sand mining in Mudipu, Mangalore after a detailed News report by "Headline Karnataka". Concerning the scandal, one has been arrested.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am