ಬ್ರೇಕಿಂಗ್ ನ್ಯೂಸ್
22-10-22 02:55 pm Mangalore Correspondent ಕರಾವಳಿ
ಮಂಗಳೂರು, ಅ.22 : ಧರ್ಮದ ಮೂಲವನ್ನು ಹುಡುಕಿ ಹೋದರೆ ಎಲ್ಲಿಯೂ ಸಿಗುವುದಿಲ್ಲ. ನಮ್ಮ ನಂಬಿಕೆ ಆಚರಣೆ ನಡವಳಿಕೆಗಳು ಸ್ವಾಭಾವಿಕವಾಗಿ ನಮ್ಮಲ್ಲಿ ಬೆಳೆದುಬಂದಿವೆ. ಇಲ್ಲಿ ಜೀವಿಸುವ ನಾವು ಅದನ್ನು ಬಿಟ್ಟಿರಲು ಸಾಧ್ಯವಿಲ್ಲ. ಅವರು ಹಿಂದೂ ಧರ್ಮದ ಯಾವ ಸೂಕ್ಷ್ಮತೆ ತಿಳಿದಿದ್ದಾರೋ ಗೊತ್ತಿಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ನಟ ಚೇತನ್ ಕಾಂತಾರ ಸಿನಿಮಾ ವಿಚಾರದಲ್ಲಿ ಅಪಸ್ವರ ಎತ್ತಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮ ಎರಡು ಜಿಲ್ಲೆಯಲ್ಲಿ ವ್ಯಾಪಕವಾಗಿ ಇರುವ ನಂಬಿಕೆ ದೈವಾರಾಧನೆ. ಇಂದಿಗೂ ನಾವು ದೈವಾರಾಧನೆ ಮಾಡುತ್ತೇವೆ. ದೈವದ ನುಡಿಗೆ ಗೌರವ ಕೊಡುತ್ತೇವೆ, ದೈವಗಳ ಮಾತಿಗೆ ಗೌರವ ಕೊಡುತ್ತೇವೆ. ಇದು ಧರ್ಮದ ಸೂಕ್ಷ್ಮತೆ, ವಿಮರ್ಶೆ ಮಾಡುವ ಅಗತ್ಯವಿಲ್ಲ ಎಂದು ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ. ಮಂಗಳೂರಿನಲ್ಲಿ ಕಾಂತಾರ ಚಿತ್ರ ತಂಡದ ಜೊತೆಗೆ ಸಿನಿಮಾ ವೀಕ್ಷಣೆ ಮಾಡಿದ ಬಳಿಕ ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.

ನಟ ಚೇತನ್ ಭೂತಕೋಲ ಹಿಂದು ಧರ್ಮದ ಭಾಗ ಅಲ್ಲ ಎಂದು ಹೇಳಿದ್ದಕ್ಕೆ, ಧರ್ಮದ ಭಾಗ ಹೌದೋ, ಅಲ್ಲವೋ ಅದು ಗೊತ್ತಿಲ್ಲ. ತುಳುನಾಡಿನ ಜನರ ಮೂಲ ಸ್ವಭಾವ ಅರಿಯದೆ ಮಾತಾನಾಡಿದರೆ ಅದು ಬೇರೆಯದೇ ಆಗುತ್ತೆ. ನಮ್ಮ ಒಳಗೆ ಆಚರಣೆಗಳು ಬೆಳೆದು ಬಂದಿವೆ ಅಷ್ಟೇ ಎಂದು ಹೇಳಿದರು.

ಸಾಮಾನ್ಯವಾಗಿ ಬರುವ ಚಿತ್ರಗಳಿಗಿಂತ ವಿಭಿನ್ನವಾಗಿ ಕಾಂತಾರ ಚಿತ್ರ ಮೂಡಿಬಂದಿದೆ. ಕರಾವಳಿ ಭಾಗದ ನಂಬಿಕೆ, ನಡವಳಿಕೆಗಳು ದೈವಾರಾಧನೆಯ ಸೂಕ್ಷ್ಮತೆಗಳು ಈ ಚಿತ್ರದಲ್ಲಿವೆ. ಇಂತಹ ಚಿತ್ರದಿಂದ ಯುವಜನಾಂಗಕ್ಕೆ ಹೊಸ ಕತೆಯ ಮತ್ತು ಹಳೆಯ ಸ್ಮರಣೆ ಆಗುತ್ತೆ. ಸ್ಥಳೀಯ ಸ್ಮರಣೆಯೊಂದಿಗೆ ಹೊಸ ದೃಷ್ಟಿಕೋನ ಕೂಡ ಬೇಕು. ಜೀವನದಲ್ಲಿ ಅಸತ್ಯದ ವಿರುದ್ಧ ಹೋರಾಡುವ ಕತೆಗಳೇ ಜಾಸ್ತಿ. ಇಂದು ಕೂಡ ನಮಗೆ ಬೇಕಾಗಿರುವುದು ಸತ್ಯದ ರಕ್ಷಣೆ, ಅನ್ಯಾಯದ ವಿರುದ್ದ ಹೋರಾಟ, ನೆಮ್ಮದಿಯ ಜೀವನ. ಕಾಂತಾರ ಚಿತ್ರ ಕೂಡ ಒಬ್ಬ ನೆಮ್ಮದಿ ಇಲ್ಲದ ವ್ಯಕ್ತಿಯಿಂದಲೇ ಆರಂಭವಾಗುತ್ತೆ. ಇಂದು ನಮಗೆ ಬೇಕಾಗಿರುವುದು ನೆಮ್ಮದಿ, ಶಾಂತಿ ಮತ್ತು ಸಹಬಾಳ್ವೆ.
ಜಾತಿ ಮತ ಪಂಥಗಳ ಭೇದ ಮರೆತು ಸಹಬಾಳ್ವೆ ಬಾಳಬೇಕೆಂಬ ಸಂದೇಶ ಈ ಚಿತ್ರದಲ್ಲಿದೆ. ಚಿತ್ರ ನೋಡಿ ಸಂತೋಷ ಪಟ್ಟಿದ್ದೇನೆ, ಆ ಮೂಡಿನಿಂದ ಇನ್ನೂ ಹೊರಗೆ ಬಂದಿಲ್ಲ. ಚಿತ್ರದ ತಂಡದವರಿಗೆ ಅಭಿನಂದನೆಗಳು. ನಮ್ಮಲ್ಲಿರುವ ನಂಬಿಕೆ ಕೂಡ ಅದೇ. ಈ ನೆಲದ ದೈವಗಳು, ಭೂತಗಳು ಯಾವತ್ತೂ ಕೂಡ ಅಧರ್ಮಕ್ಕೆ ಬೆಂಬಲ ಕೊಡುವುದಿಲ್ಲ ಎಂಬುದೇ ಈ ಚಿತ್ರದಲ್ಲಿ ಇರುವ ಸಂದೇಶ. ದೈವಗಳು ಸತ್ಯ ಧರ್ಮಕ್ಕೆ ಹೊರತು ಪಡಿಸಿ ಯಾವುದಕ್ಕೂ ಬೆಂಬಲ ಕೊಡುವುದಿಲ್ಲ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂದರು ಹೆಗ್ಗಡೆ.
There Is No Need To Criticize Religion Says Dr Veerendra Heggade after watching Kanatara. He made this statement reacting about Chethan Ahimsas Statement.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm