ಬ್ರೇಕಿಂಗ್ ನ್ಯೂಸ್
11-10-20 03:13 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಾಸಕರ ಸೂಚನೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪೊಲೀಸ್ ಗಸ್ತು ಬಿಗಿಗೊಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಈ ಸೂಚನೆ ನೀಡಲಾಗಿದ್ದು, ಎಲ್ಲ ಆಯಕಟ್ಟಿನ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ಏಳು ಗಂಟೆ ವರೆಗೆ ಪೋಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಕಾರು, ಟೆಂಪೋಗಳಲ್ಲಿ ತರುತ್ತಿರುವ ಬಗ್ಗೆ ಬಜರಂಗದಳ ನಾಯಕರು ಕೂಡ ಆಕ್ಷೇಪ ಎತ್ತಿದ್ದು, ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಅನಾಹುತಕ್ಕೆ ಜಿಲ್ಲಾಡಳಿವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಒಂದೆಡೆ ಹಿಂದು ಸಂಘಟನೆಗಳ ಆಗ್ರಹ ಮತ್ತೊಂದೆಡೆ ಆಡಳಿತ ಪಕ್ಷದ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೀಡಿದ ಸೂಚನೆಯಂತೆ ಪೊಲೀಸ್ ಕಮಿಷನರ್ ಬಿಗು ಪೋಸ್ಟಿಂಗ್ ಮಾಡಿದ್ದಾರೆ.
ಅದರಂತೆ, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಎಂಟು ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮೂಡುಬಿದ್ರೆ, ಕಾವೂರು, ಕಂಕನಾಡಿ ಗ್ರಾಮಾಂತರ, ಕಂಕನಾಡಿ ನಗರ, ಪಣಂಬೂರು, ಬಜ್ಪೆ, ಮಂಗಳೂರು ನಗರದ ಕದ್ರಿ, ಪಾಂಡೇಶ್ವರ, ಉಳ್ಳಾಲ ಹೀಗೆ ಉತ್ತರ ಮತ್ತು ದಕ್ಷಿಣ ಎಸಿಪಿ ಉಪವಿಭಾಗದಲ್ಲಿ ಪೋಸ್ಟಿಂಗ್ ಹೆಚ್ಚಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ಬಳಿಕವೇ ವಾಹನಗಳನ್ನು ಬಿಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಠಾಣಾಧಿಕಾರಿಯವರು ಈ ಪೋಸ್ಟಿಂಗ್ ಮಾಡುವುದಕ್ಕೆ ಸಿಬಂದಿ ಕೊರತೆಯ ನೆಪ ಹೇಳಬಾರದು. ಆಯಾ ಭಾಗದಲ್ಲಿ ಸೂಕ್ತ ನಿಯೋಜನೆ ಮಾಡತಕ್ಕದ್ದು ಎಂದು ಪೊಲೀಸ್ ಕಮಿಷನರ್ ಆಯಾ ಠಾಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ.
In order to control cattle trafficking in Mangaluru, Police Commissioner Vikas Kumar orders to strengthen checkposts with much police personnel
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm