ಬ್ರೇಕಿಂಗ್ ನ್ಯೂಸ್
11-10-20 03:13 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಾಸಕರ ಸೂಚನೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪೊಲೀಸ್ ಗಸ್ತು ಬಿಗಿಗೊಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಈ ಸೂಚನೆ ನೀಡಲಾಗಿದ್ದು, ಎಲ್ಲ ಆಯಕಟ್ಟಿನ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ಏಳು ಗಂಟೆ ವರೆಗೆ ಪೋಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಕಾರು, ಟೆಂಪೋಗಳಲ್ಲಿ ತರುತ್ತಿರುವ ಬಗ್ಗೆ ಬಜರಂಗದಳ ನಾಯಕರು ಕೂಡ ಆಕ್ಷೇಪ ಎತ್ತಿದ್ದು, ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಅನಾಹುತಕ್ಕೆ ಜಿಲ್ಲಾಡಳಿವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಒಂದೆಡೆ ಹಿಂದು ಸಂಘಟನೆಗಳ ಆಗ್ರಹ ಮತ್ತೊಂದೆಡೆ ಆಡಳಿತ ಪಕ್ಷದ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೀಡಿದ ಸೂಚನೆಯಂತೆ ಪೊಲೀಸ್ ಕಮಿಷನರ್ ಬಿಗು ಪೋಸ್ಟಿಂಗ್ ಮಾಡಿದ್ದಾರೆ.


ಅದರಂತೆ, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಎಂಟು ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮೂಡುಬಿದ್ರೆ, ಕಾವೂರು, ಕಂಕನಾಡಿ ಗ್ರಾಮಾಂತರ, ಕಂಕನಾಡಿ ನಗರ, ಪಣಂಬೂರು, ಬಜ್ಪೆ, ಮಂಗಳೂರು ನಗರದ ಕದ್ರಿ, ಪಾಂಡೇಶ್ವರ, ಉಳ್ಳಾಲ ಹೀಗೆ ಉತ್ತರ ಮತ್ತು ದಕ್ಷಿಣ ಎಸಿಪಿ ಉಪವಿಭಾಗದಲ್ಲಿ ಪೋಸ್ಟಿಂಗ್ ಹೆಚ್ಚಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ಬಳಿಕವೇ ವಾಹನಗಳನ್ನು ಬಿಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಠಾಣಾಧಿಕಾರಿಯವರು ಈ ಪೋಸ್ಟಿಂಗ್ ಮಾಡುವುದಕ್ಕೆ ಸಿಬಂದಿ ಕೊರತೆಯ ನೆಪ ಹೇಳಬಾರದು. ಆಯಾ ಭಾಗದಲ್ಲಿ ಸೂಕ್ತ ನಿಯೋಜನೆ ಮಾಡತಕ್ಕದ್ದು ಎಂದು ಪೊಲೀಸ್ ಕಮಿಷನರ್ ಆಯಾ ಠಾಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ.
In order to control cattle trafficking in Mangaluru, Police Commissioner Vikas Kumar orders to strengthen checkposts with much police personnel
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am