ಬ್ರೇಕಿಂಗ್ ನ್ಯೂಸ್
11-10-20 03:13 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಾಸಕರ ಸೂಚನೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪೊಲೀಸ್ ಗಸ್ತು ಬಿಗಿಗೊಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಈ ಸೂಚನೆ ನೀಡಲಾಗಿದ್ದು, ಎಲ್ಲ ಆಯಕಟ್ಟಿನ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ಏಳು ಗಂಟೆ ವರೆಗೆ ಪೋಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಕಾರು, ಟೆಂಪೋಗಳಲ್ಲಿ ತರುತ್ತಿರುವ ಬಗ್ಗೆ ಬಜರಂಗದಳ ನಾಯಕರು ಕೂಡ ಆಕ್ಷೇಪ ಎತ್ತಿದ್ದು, ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಅನಾಹುತಕ್ಕೆ ಜಿಲ್ಲಾಡಳಿವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಒಂದೆಡೆ ಹಿಂದು ಸಂಘಟನೆಗಳ ಆಗ್ರಹ ಮತ್ತೊಂದೆಡೆ ಆಡಳಿತ ಪಕ್ಷದ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೀಡಿದ ಸೂಚನೆಯಂತೆ ಪೊಲೀಸ್ ಕಮಿಷನರ್ ಬಿಗು ಪೋಸ್ಟಿಂಗ್ ಮಾಡಿದ್ದಾರೆ.


ಅದರಂತೆ, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಎಂಟು ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮೂಡುಬಿದ್ರೆ, ಕಾವೂರು, ಕಂಕನಾಡಿ ಗ್ರಾಮಾಂತರ, ಕಂಕನಾಡಿ ನಗರ, ಪಣಂಬೂರು, ಬಜ್ಪೆ, ಮಂಗಳೂರು ನಗರದ ಕದ್ರಿ, ಪಾಂಡೇಶ್ವರ, ಉಳ್ಳಾಲ ಹೀಗೆ ಉತ್ತರ ಮತ್ತು ದಕ್ಷಿಣ ಎಸಿಪಿ ಉಪವಿಭಾಗದಲ್ಲಿ ಪೋಸ್ಟಿಂಗ್ ಹೆಚ್ಚಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ಬಳಿಕವೇ ವಾಹನಗಳನ್ನು ಬಿಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಠಾಣಾಧಿಕಾರಿಯವರು ಈ ಪೋಸ್ಟಿಂಗ್ ಮಾಡುವುದಕ್ಕೆ ಸಿಬಂದಿ ಕೊರತೆಯ ನೆಪ ಹೇಳಬಾರದು. ಆಯಾ ಭಾಗದಲ್ಲಿ ಸೂಕ್ತ ನಿಯೋಜನೆ ಮಾಡತಕ್ಕದ್ದು ಎಂದು ಪೊಲೀಸ್ ಕಮಿಷನರ್ ಆಯಾ ಠಾಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ.
In order to control cattle trafficking in Mangaluru, Police Commissioner Vikas Kumar orders to strengthen checkposts with much police personnel
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm