ಬ್ರೇಕಿಂಗ್ ನ್ಯೂಸ್
26-10-22 10:41 pm Mangalore Correspondent ಕರಾವಳಿ
ಮಂಗಳೂರು, ಅ.26 : ಕಂಕನಾಡಿ ಬಳಿಯ ಜೆಪ್ಪು ಬಪ್ಪಾಲ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎನ್ನುವ ವದಂತಿ ಹರಡಿತ್ತು. ಬಳಿಕ ಪೊಲೀಸರು ಚೆಕ್ ಮಾಡಿದಾಗ, ಫುಡ್ ಪಾಯ್ಸನ್ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದು ತಿಳಿದುಬಂತು.
ಜೆಪ್ಪು ಬಪ್ಪಾಲ್ ನಿವಾಸಿ ಅರವಿಂದ ರಾವ್ (52), ಅವರ ಪತ್ನಿ ಪ್ರಭಾವತಿ (45), ಮಕ್ಕಳಾದ ಸೌರಭ್(20) ಮತ್ತು ಪ್ರತೀಕ್ (18) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಬೆಳಗ್ಗೆ ಅವರು ಮನೆಯಲ್ಲಿ ಎದ್ದಿರಲಿಲ್ಲ. ಬೆಳಗ್ಗೆ ಬಾಗಿಲು ತೆಗೆಯದೇ ಇರುವುದನ್ನು ಗಮನಿಸಿದ ಸಂಬಂಧಿಕರು ಒಡೆದು ನೋಡಿದಾಗ ನಾಲ್ವರು ಕೂಡ ವಾಂತಿ ಮಾಡಿದ್ದು ಕಂಡುಬಂದಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರು ನಿನ್ನೆ ರಾತ್ರಿ ಹೆಸರು ಬೇಳೆ ಹಾಗೂ ಐಸ್ ಕ್ರೀಂ ತಿಂದು ಮಲಗಿದ್ದಾರೆ ಎನ್ನಲಾಗಿದ್ದು ಅದು ಫುಡ್ ಪಾಯ್ಸನ್ ಆಗಿರುವುದಾಗಿ ನಂಬಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು ನಾಲ್ವರು ಕೂಡ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಈ ಘಟನೆ ಮಾತ್ರ ನಾಲ್ವರು ಆತ್ಮಹತ್ಯೆ ಯತ್ನ ಎಂದೇ ಸುದ್ದಿ ಹಬ್ಬುವಂತಾಗಿತ್ತು. ಮನೆಯಲ್ಲಿ ವಾಂತಿ ಮಾಡಿ ಬಿದ್ದುಕೊಂಡಿದ್ದವರನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ಒಯ್ದಿದ್ದರಿಂದ ಅಂತಹ ಸಂಶಯ ಬರುವಂತಾಗಿತ್ತು. ಈ ಬಗ್ಗೆ ಅವರಲ್ಲಿ ವೈದ್ಯರು ಪ್ರಶ್ನೆ ಮಾಡಿದಾಗ, ಯಾವುದೇ ವಿಷಕಾರಿ ವಸ್ತು ತಿಂದಿಲ್ಲ ಎಂದಿದ್ದಾರೆ.
In a bizarre case, what was presumed to be a mass suicide attempt by a family of four turned out to be an instance of food poisoning.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm